೭೦ ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಬಡತನ ಹೊಗಲಾಡಿಸಲಿಲ್ಲ : ಜಗದೀಶ್ ಶೆಟ್ಟರ್
ಕಲಬುರಗಿ, 12 ಜೂನ್ (ಹಿ.ಸ.) : ಆ್ಯಂಕರ್ : ೭೦ ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಬಡತನ ಹೊಗಲಾಡಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ,ಸಂಸದ ಜಗದೀಶ್ ಶೆಟ್ಟರ್ ಕೇಂದ್ರ ಸರಕಾರದ ವಿರುದ್ದ ಕಿಡಿಕಾರಿದರು. ನಗರದ ಹೊರವಲಯದ ನಾಗನಹಳ್ಳಿಯ ರಸ್ತೆಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನ
೭೦ ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಬಡತನ ಹೊಗಲಾಡಿಸಲಿಲ್ಲ : ಜಗದೀಶ್ ಶೆಟ್ಟರ್


ಕಲಬುರಗಿ, 12 ಜೂನ್ (ಹಿ.ಸ.) :

ಆ್ಯಂಕರ್ : ೭೦ ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಬಡತನ ಹೊಗಲಾಡಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ,ಸಂಸದ ಜಗದೀಶ್ ಶೆಟ್ಟರ್ ಕೇಂದ್ರ ಸರಕಾರದ ವಿರುದ್ದ ಕಿಡಿಕಾರಿದರು.

ನಗರದ ಹೊರವಲಯದ ನಾಗನಹಳ್ಳಿಯ ರಸ್ತೆಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಂದ ಮೇಲೆ ಗರೀಬಿ ದೂರಗೊಳಿಸಿ,ಬಡವರು ನೆಮ್ಮದಿಯ ಜೀವನ ಸಾಗಿಸಲು ಅನುಕೂಲವಾಗುವಂತೆ ಹಲವು ಯೋಜನೆ ನೀಡಿದ್ದು,೧೧ ವರ್ಷಗಳ ಹಲವು ಸಾಧನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಿಳಿಸುವ ಕೆಲಸ ಆಗಲಿ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ಕಳೆದ ೧೧ ವರ್ಷಗಳಿಂದ ಜನಪರವಾದ ಉತ್ತಮ ಆಡಳಿತ ನೀಡಿದ ಪರಿಣಾಮವಾಗಿ, ಆರ್ಥಿಕವಾಗಿ ೧೦ನೇ ಸ್ಥಾನದಲ್ಲಿದ್ದ ಭಾರತ ಜಪಾನ್ ಹಿಂದಿಕ್ಕಿ,೪ನೇ ಸ್ಥಾನಕ್ಕೆ ಬಂದಿದ್ದು,ಶೀಘ್ರದಲ್ಲೇ ಆರ್ಥಿಕವಾಗಿ ೩ನೇ ಸ್ಥಾನ ಅಲಂಕರಿಸಲಿದೆ ಎಂದರು.

೨೦೪೭ರವರೆಗೆ ವಿಕಸಿತ ಭಾರತದ ಸಂಕಲ್ಪ ದೃಷ್ಟಿಯಲ್ಲಿಟ್ಟುಕೊಂಡು ಭಾರತ ಆರ್ಥಿಕವಾಗಿ ಅಗ್ರಸ್ಥಾನ ಹೊಂದಲಿದೆ. ೧೧ ವರ್ಷದ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ,ಆಯುಷ್ಮಾನ ಭಾರತ,ಜಲಜೀವನ ಮಿಷನ್, ಸೇರಿದಂತೆ

ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು,ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ಮುಟ್ಟಿಸಿದೆ.ಕಳೆದ ೧೧ ವರ್ಷಗಳ ಆಡಳಿತದಲ್ಲಿ ೩೪ ಪ್ರತಿಶತದಲ್ಲಿ ೨೭ ಪ್ರತಿಶತ ಕಡುಬಡವರು ಬಡತನ ರೇಖೆಯಿಂದ ಹೊರಬಂದಿದ್ದು,೭.೫ ಪ್ರತಿಶತ ಕಡು ಬಡತನ ಹೊಂದಿದ್ದಾರೆ ಎಂದರು.

ದೇಶದಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಮಾಡಿದರೂ ಪ್ರಧಾನಿ ನರೇಂದ್ರ ಮೋದಿಯವರು ಏನು ಮಾಡಿದ್ದಾರೆಂದು ಸಿಎಂ ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ ಎನ್ನುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್,ಮಾಜಿ ಸಂಸದ ಉಮೇಶ್ ಜಾಧವ್,ಭಗವಂತ ಖೂಬಾ ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್, ಜಿಲ್ಲಾಧ್ಯಕ್ಷ ಅಶೋಕ್ ಬಗಲಿ,ಶಾಸಕ ಬಸವರಾಜ ಮತ್ತಿಮಡು,ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಸುಭಾಷ ಗುತ್ತೇದಾರ್, ಓಬಿಸಿ ರಾಜ್ಯ ಕಾರ್ಯದರ್ಶಿ ಅವ್ವಣ್ಣಾ ಮ್ಯಾಕೇರಿ, ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಮಹಾದೇವ ಬೆಳಮಗಿ, ಶಿವಯೋಗಿ ನಾಗೇನಹಳ್ಳಿ,ಇಂದಿರಾ ಶೆಟ್ಟಿ,ಶರಣಪ್ಪ ತಳವಾರ,ಚಂದಮ್ಮ ಪಾಟೀಲ್, ಹರ್ಷಾನಂದ ಗುತ್ತೇದಾರ್, ಸಂತೋಷ ಹಾದಿಮನಿ, ಬಾಬುರಾವ ಹಾಗರಗುಂಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande