ರಾಯಚೂರು, 12 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ-2025ರ ಅಂಗವಾಗಿ ಜೂನ್ 18ರ ಬೆಳಿಗ್ಗೆ 11ಗಂಟೆಗೆ ನಗರದ ಕನ್ನಡ ಭವನದಲ್ಲಿ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ.
ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬ ಘೋಷವಾಕ್ಯದೊಂದಿಗೆ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಉಪಯೋಗದಿಂದಾಗುವ ಹಾನಿ ಮತ್ತು ಪರ್ಯಾಯ ವಸ್ತುಗಳ ಉಪಯೋಗ ಮಾಡುವ ಕುರಿತು ರಾಯಚೂರು ನಗರದ ಫ್ರೌಢ ಶಾಲಾ ವಿರ್ದ್ಯಾರ್ಥಿಗಳಿಗೆ ಸ್ಥಳದಲ್ಲೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಪ್ರತಿ ಸ್ಪರ್ಧೆಯಲ್ಲಿ ತಮ್ಮ ಪ್ರೌಢಶಾಲೆಯ 8ನೇ, 9ನೇ ಮತ್ತು 10ನೇ ತರಗತಿಗಳಿಂದ ಚಿತ್ರಕಲೆ ಸ್ಪರ್ಧೆಗೆ 03 ವಿದ್ಯಾರ್ಥಿಗಳು ಮತ್ತು ಪ್ರಬಂಧ ಸ್ಪರ್ಧೆಗೆ 03 ವಿದ್ಯಾರ್ಥಿಗಳಂತೆ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಗೆ ಪೇಪರ್ ಶೀಟ್ಸ್ ಮತ್ತು ಚಿತ್ರಕಲಾ ಸ್ಪರ್ಧೆಗೆ ಡ್ರಾಯಿಂಗ್ ಶೀಟ್ಸ್ಗಳನ್ನು ಮಾತ್ರ ನೀಡಲಾಗುವುದು ಹಾಗೂ ಚಿತ್ರಕಲಾ ಸ್ಪರ್ಧೆಗೆ ಬೇಕಾದ ವಸ್ತುಗಳನ್ನು ತಾವೇ ತೆಗೆದುಕೊಂಡು ಬರುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಶಾಲಾ ವಿದ್ಯಾರ್ಥಿಗಳು ಮಾಹಿತಿಗಾಗಿ ತಮ್ಮ ಶಾಲೆಯ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆ ಇರುವ ಲೆಟರ್ಹೆಡ್ನೊಂದಿಗೆ ಹಾಜರಾಗುವುದು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್