ಪ್ರತಿಯೊಬ್ಬ ಮಗುವಿಗೂ ಶಿಕ್ಷಣ, ಆರೋಗ್ಯ, ರಕ್ಷಣೆ ಅಗತ್ಯ : ಖರ್ಗೆ
ನವದೆಹಲಿ, 12 ಜೂನ್ (ಹಿ.ಸ.) : ಆ್ಯಂಕರ್ : ಬಾಲ ಕಾರ್ಮಿಕ ಪದ್ಧತಿ ಮಾನವೀಯತೆಯ ವಿರುದ್ಧದ ಅಪರಾಧ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅವರು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದು, ಭಾರತದಲ್ಲಿ ಬಾಲ ಕಾರ್ಮ
Kharge


Kharge


ನವದೆಹಲಿ, 12 ಜೂನ್ (ಹಿ.ಸ.) :

ಆ್ಯಂಕರ್ : ಬಾಲ ಕಾರ್ಮಿಕ ಪದ್ಧತಿ ಮಾನವೀಯತೆಯ ವಿರುದ್ಧದ ಅಪರಾಧ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅವರು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದು, ಭಾರತದಲ್ಲಿ ಬಾಲ ಕಾರ್ಮಿಕರನ್ನು ತಡೆಗಟ್ಟಲು 1986ರ ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಪ್ರಮುಖ ಪಾತ್ರ ವಹಿಸುತ್ತಿದ್ದು, 2011ರ ಜನಗಣತಿಯ ಪ್ರಕಾರ 5-15 ವರ್ಷ ವಯಸ್ಸಿನ 1 ಕೋಟಿ ಮಕ್ಕಳಿಗೆ ಕಠಿಣ ಪರಿಸ್ಥಿತಿಗಳಲ್ಲಿ ದುಡಿಯುವ ಸ್ಥಿತಿ ಇದೆ.

ಸಂಸದೀಯ ಸಮಿತಿಯ ವರದಿ ಪ್ರಕಾರ, ಅಪರಾಧಿಗಳಿಗೆ ದಂಡ ಹೆಚ್ಚಿಸುವ ಮತ್ತು ಪರವಾನಗಿ ರದ್ದುಪಡಿಸುವ ಶಿಫಾರಸು ಮಾಡಲಾಗಿದೆ. ಬಡತನ, ಆರ್ಥಿಕ ಅಸಮಾನತೆ ಹಾಗೂ ಕೋವಿಡ್-19 ಪರಿಣಾಮದಿಂದ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ.

ಬಾಲ್ಯ ರಕ್ಷಣೆಗೆ ಒಟ್ಟಾಗಿ ಕಾರ್ಯ ನಿರ್ವಹಿಸಲು ಮತ್ತು ಈ ಅಮಾನವೀಯ ಪದ್ಧತಿಗೆ ಅಂತ್ಯ ಕಾಣಿಸೋಣ ಎಂದು ಅವರು ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande