ಹುಬ್ಬಳ್ಳಿ, 12 ಜೂನ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯಲ್ಲಿ ಸುರಿದ ಭಾರಿ ಮಳೆ ನೀರಿನಲ್ಲಿ ವ್ಯಕ್ತಿಯೊರ್ವ ಕೊಚ್ಚಿಕೊಂಡು ಹೋದ ಘಟನೆ ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ನಡೆದಿದೆ.
ಬೀರಬಂದ ಓಣಿಯ ಹುಸೇನ ಕಳಸ ಎಂಬವರೇ ಕೊಚ್ಚಿಕೊಂಡು ಹೋದವರು. ರಸ್ತೆ ಪಕ್ಕದ ಚರಂಡಿಯ ನೀರಿನಲ್ಲಿ ಆಯತಪ್ಪಿ ಜಾರಿ ಬಿದ್ದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಹುಡುಕಾಟ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa