ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿಗೆ ಬದ್ದ: ಅಜಯಸಿಂಗ್
ಕಲಬುರಗಿ, 12 ಜೂನ್ (ಹಿ.ಸ.) : ಆ್ಯಂಕರ್ : ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ನುಡಿದಂತೆ ನಡೆದಿದೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ, ಆರೋಗ್ಯ, ಉದ್ಯೋಗ, ಅರಣ್ಯ ಹೆಚ್ಚಳಕ್ಕೆ ಒತ್ತು ನೀಡಿ ಈ ಭಾಗದ ಅಭಿವೃದ್ಧಿಗೆ ಬದ್ದವಾಗಿದೆ ಎಂದು
ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿಗೆ ಬದ್ದ:ಅಜಯಸಿಂಗ್


ಕಲಬುರಗಿ, 12 ಜೂನ್ (ಹಿ.ಸ.) :

ಆ್ಯಂಕರ್ : ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ನುಡಿದಂತೆ ನಡೆದಿದೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ, ಆರೋಗ್ಯ, ಉದ್ಯೋಗ, ಅರಣ್ಯ ಹೆಚ್ಚಳಕ್ಕೆ ಒತ್ತು ನೀಡಿ ಈ ಭಾಗದ ಅಭಿವೃದ್ಧಿಗೆ ಬದ್ದವಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್ ಧರ್ಮಸಿಂಗ್ ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ, ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ ಹಾಗೂ ಉದ್ಯೋಗ ಆವಿಷ್ಕಾರ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸಾಕಷ್ಟು ಅನುದಾನ ನೀಡಿದೆ. ಅದರಲ್ಲೂ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಕೆಆರ್ಡಿಬಿ ಶ್ರಮಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ 1.12 ಕೋಟಿ ಜನಸಂಖ್ಯೆಗೆ ಆರೋಗ್ಯ ಭಾಗ್ಯ ಸಿಗಬೇಕು. ಪ್ರತಿ ಹಳ್ಳಿಗೂ ಆರೋಗ್ಯ ಸೌಲಭ್ಯ ದೊರೆಯಬೇಕು ಎನ್ನುವ ಉದ್ದೇಶದಿಂದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಆರೋಗ್ಯ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಯಾದಗಿರಿ ಜಿಲ್ಲಾಡಳಿತ ವತಿಯಿಂದ ಇದೆ ಜೂನ್ 14ರಂದು ಯಾದಗಿರಿಯಲ್ಲಿ ಆರೋಗ್ಯ ಆವಿಷ್ಕಾರ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಸುಮಾರು 440 ಕೋಟಿ ರು. ವೆಚ್ಚದ ವಿವಿಧ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಅಲ್ಲದೇ, ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗೂಂಡುರಾವ್, ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪಾ ದರ್ಶನಾಪುರ ಅವರು ಸೇರಿ ಕಲ್ಯಾಣ ಕರ್ನಾಟಕದ ಎಲ್ಲಾ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಪುಟದ ನಿರ್ಣಯದಂತೆ, ಅನುದಾನ ಬಳಕೆ:

ಕಳೆದ ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಅರೋಗ್ಯ ಕ್ಷೇತ್ರಕ್ಕೆ ಸುಮಾರು 873 ಕೋಟಿ ರು. ಅನುದಾನ ಮೀಸಲಿಡಲಾಗಿತ್ತು. ಅದರಲ್ಲಿ ಕೆಕಆರ್ಡಿಬಿ ವತಿಯಿಂದ 416 ಕೋಟಿ ರು. ಅನುದಾನ ನೀಡುವ ತೀರ್ಮಾನ ಕೈಗೊಳ್ಳಲಾಗಿತ್ತು. ಈಗ ಮೊದಲ ಹಂತದಲ್ಲಿ 208 ಕೋಟಿ ರು. ಅನುದಾನ ಬಿಡುಗಡೆ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಲ್ಲಾ 41 ಕ್ಷೇತ್ರಗಳಲ್ಲೂ ಆರೋಗ್ಯ ಆವಿಷ್ಕಾರದ ಅಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರ ಹಾಗೂ ಅನೇಕ ಆರೋಗ್ಯ ಕೇಂದ್ರಗಳನ್ನು ಮೇಲ್ದೇರ್ಜೆ ಏರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಪ್ರತಿ ಜಿಲ್ಲೆಯಲ್ಲೂ ಕೆಕೆಆರ್ಡಿಬಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಅಲ್ಪಸಂಖ್ಯಾತ ಹಾಗೂ ಹಿಂದುಳಿದ ಸಮುದಾಯಗಳ ಇಲಾಖೆಯ ಕಾರ್ಯಕ್ರಮ ಕೊಪ್ಪಳದಲ್ಲಿ ನಡೆಸಲು ಚಿಂತನೆ ನಡೆಸಲಾಗುತ್ತಿದೆ. ನಾಳೆ ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಅಜಯ್ ಸಿಂಗ್ ಮನವಿ ಮಾಡಿದರು.

ಹೆಲ್ತ್ ಹಬ್ ಆಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ:

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಈ ಭಾಗದ ಕಟ್ಟಕಡೆಯ ಮನುಷ್ಯನಿಗೂ ಆರೋಗ್ಯದ ಸೌಲಭ್ಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಆರೋಗ್ಯವಿಷ್ಕಾರ ಜಾರಿಗೆ ತರಲಾಗಿದೆ. ಈಗಾಗಲೇ, ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಚಾಲನೆ ಸಿಕ್ಕಿದೆ. ಇದರ ಜತೆಗೆ ನಿಮಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ, ಕೊಪ್ಪಳದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ 100 ಕೋಟಿ, ರಾಯಚೂರ್ ನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ 50 ಕೋಟಿ ಹಾಗೂ ಬೀದರ್ನಲ್ಲಿ ಸರಕಾರಿ ಆಸ್ಪತ್ರೆಯ ಸುಧಾರಣೆಗೆ ಅನುದಾನ ಮೀಸಲಿಡಲಾಗಿದೆ. ಇದಲ್ಲದೇ, 33 ಹೊಸ ಹಾಟ್ ಲೈನ್ ಅಂಬುಲೆನ್ಸ್ ಗಳನ್ನ ಶೀಘ್ರವೇ ಖರೀದಿ ಮಾಡಲಾಗುವುದು. ಯಾದಗಿರಿಯಲ್ಲಿ 416 ಕೋಟಿ ರು.ಗಳ ವಿವಿಧ ಕಾಮಗಾರಿಗಳಿಗೆ ಸಿಎಂ ಶನಿವಾರ (14ರಂದು) ಚಾಲನೆ ನೀಡಲಿದ್ದಾರೆ. ಮುಂದಿನ ಎರಡು ವರ್ಷದಲ್ಲಿ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ 1500 ಕೋಟಿ ರು.ಗಳನ್ನು ಖರ್ಚು ಮಾಡಬೇಕು ಎನ್ನುವ ಗುರಿ ಹೊಂದಲಾಗಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ರಾಜ್ಯದ ಹೆಲ್ತ್ ಹಬ್ ಆಗಿ ಮಾರ್ಪಡಲಿದೆ ಎಂದು ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯ್ ಧರ್ಮಸಿಂಗ್ ಮಾಹಿತಿ ನೀಡಿದರು.

ಕೋಟ್:

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಸರಕಾರ ಹಾಗೂ ಕೆಕೆಆರ್ಡಿಬಿ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ. ಜನರ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಮುಂದಿನ ಎರಡು ವರ್ಷದಲ್ಲಿ ಹೆಚ್ಚಿನ ಅನುದಾನ ಆರೋಗ್ಯ ಕ್ಷೇತ್ರಕ್ಕೆ ಮೀಸಲು ಇಡಲಾಗುವುದು.

- ಡಾ. ಅಜಯ್ ಧರ್ಮಸಿಂಗ್, ಅಧ್ಯಕ್ಷ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande