ರಾಯಚೂರು, 12 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಅಭಿವೃದ್ದಿಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜೂನ್ 12ರಿಂದ ಜೂನ್ 18ರವರೆಗೆ ರಾಯಚೂರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ ಮಾಹಿತಿ ಪ್ರದರ್ಶನ ಮಳಿಗೆಗೆ ರಾಯಚೂರ ಸಂಸದರಾದ ಜಿ.ಕುಮಾರ ನಾಯಕ ಅವರು ಜೂನ್ 12 ರಂದು ಚಾಲನೆ ನೀಡಿದ್ದಾರೆ.
ಬೆಳಗ್ಗೆ ರಾಯಚೂರ ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ ರಾಯಚೂರ ಕೇಂದ್ರ ಬಸ್ ನಿಲ್ದಾಣಕ್ಕೆ ಆಗಮಿಸಿದ ಸಂಸದರು, ಕೇಂದ್ರ ಬಸ್ ನಿಲ್ದಾಣದ ಮುಖ್ಯದ್ವಾರದ ಮೂಲಕ ಆಗಮಿಸುವ ವೇಳೆ 'ಗ್ಯಾರಂಟಿ ಸಮರ್ಪಣೆ ಅಭಿವೃದ್ಧಿಯ ಸಂಕಲ್ಪ, ನಾಡಿನ ಏಳು ಕೋಟಿ ಜನರ ಬೆಳಕು ಗ್ಯಾರಂಟಿ ಬದುಕು' ಫಲಕದ ಬಳಿಯಲ್ಲಿ ನಿಂತು ಸೆಲ್ಫಿ ತೆಗೆಯಿಸಿಕೊಂಡದ್ದು ವಿಶೇಷವಾಗಿತ್ತು. ಬಳಿಕ ರಿಬ್ಬನ್ ಕತ್ತರಿಸುವ ಮೂಲಕ ಸಂಸದರು, ಮಾಹಿತಿಯ ಮಳಿಗೆಗೆ ಚಾಲನೆ ನೀಡಿದರು.
ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಗಳಿಗೆ ರಾಜ್ಯ ಸರಕಾರ ನೀಡಿದ ನೆರವು, ರಾಜ್ಯ ಸರಕಾರವು ವಸತಿ ರಹಿತರಿಗೆ ಸೂರು ಕಲ್ಪಿಸಿದ್ದು, ವಿದ್ಯಾಸಿರಿ ಯೋಜನೆ, ಇಂದಿರಾ ಕ್ಯಾಂಟೀನ್, ಆರೋಗ್ಯ ಯೋಜನೆಗಳು ಸೇರಿದಂತೆ ನಾನಾ ಮಾಹಿತಿಯ ಫಲಕಗಳನ್ನು ಸಂಸದರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ಪರಿಚಯಿಸುವ ಈ ಪ್ರದರ್ಶನ ಚೆನ್ನಾಗಿ ಮೂಡಿ ಬಂದಿದೆ. ಶುಭಾಶಯಗಳು ಎಂದು ಇದೆ ವೇಳೆ ಸಂಸದರು ಸಂದರ್ಶಕರ ಪುಸ್ತಕದಲ್ಲಿ ಬರೆದು ಸಂತಸ ವ್ಯಕ್ತಪಡಿಸಿದರು.
ಪುಸ್ತಕ ಬಿಡುಗಡೆ: ರಾಯಚೂರಿನ ವಾರ್ತಾ ಇಲಾಖೆಯು ಪ್ರಕಟಿಸಿದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಯ ರಾಯಚೂರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಹಿತಿಯ 'ಎಡೆದೊರೆ ನಾಡಲ್ಲಿ ಪಂಚ ಗ್ಯಾರಂಟಿ ಯಶೋಗಾಥೆ' ಪುಸ್ತಕವನ್ನು ಸಂಸದರು ಇದೆ ವೇಳೆ ಬಿಡುಗಡೆ ಮಾಡಿದರು.
ಪುಸ್ತಕ ವಿತರಣೆ: ವಾರ್ತಾ ಇಲಾಖೆ ಪ್ರಕಟಿಸುವ ವಾರ್ತಾ ಜನಪದ ಮಾಸಿಕ ಮತ್ತು ರಾಯಚೂರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಹಿತಿಯ 'ಎಡೆದೊರೆ ನಾಡಲ್ಲಿ ಪಂಚ ಗ್ಯಾರಂಟಿ ಯಶೋಗಾಥೆ' ಪುಸ್ತಕವನ್ನು ಇದೆ ವೇಳೆ ಸಾರ್ವಜನಿಕರಿಗೆ ವಿತರಿಸಲಾಯಿತು.
ಇದೆ ವೇಳೆ, ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘದ ಶ್ರೀ ಪತಂಗೆ ಜಯವಂತರಾವ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಮಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಎಂ.ಎಸ್.ಚಂದ್ರಶೇಖರ, ರಾಯಚೂರ ವಾರ್ತಾ ಇಲಾಖೆಯ ಗವಿಸಿದ್ದಪ್ಪ ಹೊಸಮನಿ, ಪ್ರಕಾಶ, ಲಿಂಗರಾಜ್, ಹೊರಗುತ್ತಿಗೆ ನೌಕರರಾದ ರಮೇಶ, ವೆಂಕಟೇಶ ಹಾಗೂ ಇತರರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್