ರಾಯಚೂರು ಕೃಷಿ ವಿಜ್ಞಾನಗಳ ವಿವಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ
ರಾಯಚೂರು, 12 ಜೂನ್ (ಹಿ.ಸ.) : ಆ್ಯಂಕರ್ : ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಸೇರಿ ಇನ್ನೀತರ ಸಿಬ್ಬಂದಿಯನ್ನು ಕಾಲಕಾಲಕ್ಕೆ ಭರ್ತಿ ನಡೆಸಿ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕಾರ್ಯ ಸಾಮರ್ಥ್ಯವನ್ನು ಬಲಪಡಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ
ರಾಯಚೂರು : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ


ರಾಯಚೂರು : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ


ರಾಯಚೂರು, 12 ಜೂನ್ (ಹಿ.ಸ.) :

ಆ್ಯಂಕರ್ : ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಸೇರಿ ಇನ್ನೀತರ ಸಿಬ್ಬಂದಿಯನ್ನು ಕಾಲಕಾಲಕ್ಕೆ ಭರ್ತಿ ನಡೆಸಿ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕಾರ್ಯ ಸಾಮರ್ಥ್ಯವನ್ನು ಬಲಪಡಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರು ಆಗಿರುವ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ ಅವರು ನಿರ್ದೇಶನ ನೀಡಿದ್ದಾರೆ.

ಜೂನ್ 11ರಂದು ವಿಶ್ವ ವಿದ್ಯಾಲಯಕ್ಕೆ ಭೇಟಿ ನೀಡಿ, ಕೃಷಿ ಇಲಾಖೆಯ ಭರವಸೆ ಸಂಖ್ಯೆ 8191ಕ್ಕೆ ಸಂಬಂಧಿಸಿದಂತೆ, ಕೃಷಿ ವಿವಿ ಸಭಾಂಗಣದಲ್ಲಿ ಸಭೆ ನಡೆಸಿ ಅವರು ಪರಿಶೀಲನೆ ನಡೆಸಿ ಮಾತನಾಡಿದರು.

ರಾಜ್ಯ ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಕೈಗೊಂಡ ಕ್ರಮಗಳ ಬಗ್ಗೆ ವಿಧಾನ ಪರಿಷತ್ ಶಾಸಕರಾದ ಎಸ್.ವಿ.ಸಂಕನೂರ ಅವರು 2021ರಲ್ಲಿ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸಿದ್ದರು. ಆ ವೇಳೆ ಕೃಷಿ ಸಚಿವರು ಪ್ರತಿಕ್ರಿಯಿಸಿ, ರಾಜ್ಯದಲ್ಲಿ ನಾಲ್ಕು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿನ ಕೃಷಿ ವಿಜ್ಞಾನ ಕೇಂದ್ರಗಳು/ಕೃಷಿ ಸಂಶೋಧಾನ ಕೇಂದ್ರಗಳಲ್ಲಿ ಐಸಿಎಆರ್‍ನಿಂದ ಶೇ.100ರಷ್ಟು ಅನುದಾನಿತ ಕೆವಿಕೆಯಲ್ಲಿ ಖಾಲಿ ಇರುವ 49 ಬೋಧಕರ ಹಾಗೂ 83 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವಂತೆ ರಾಯಚೂರ ಸೇರಿದಂತೆ ವಿವಿಧ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಿಗೆ ನಿರ್ದೇಶಿಸಲಾಗಿದೆ ಎಂದು ಭರವಸೆ ನೀಡಿದ್ದರು. ಈ ಬಗ್ಗೆ ಏನು ಕ್ರಮ ಜರುಗಿಸಲಾಗಿದೆ ಎಂದು ಅಧ್ಯಕ್ಷರು ಪ್ರಶ್ನಿಸಿದರು.

ಕೃಷಿ ವಿಜ್ಞಾನಗಳ ಕೇಂದ್ರಗಳಲ್ಲಿ ಖಾಲಿ ಇದ್ದ 7 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿರುತ್ತದೆ. 1 ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರ ಹುದ್ದೆಯನ್ನು ಸಹ ನೇಮಕಾತಿ ಮಾಡಿದೆ. ಮುಂದುವರೆದು 18 ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯ ಆದೇಶ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವಿಶ್ವ ವಿದ್ಯಾಲಯದ ಅಂತರ್ಜಾಲದಲ್ಲಿ ಭಿತ್ತರಿಸಲಾಗಿದೆ. ಈ ಹುದ್ದೆಗಳನ್ನು ಬೇಗನೇ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಭರವಸೆ ಸಂಖ್ಯೆ 8191ಕ್ಕೆ ಈಗಾಗಲೇ ಅನುಪಾಲನಾ ವರದಿ ನೀಡಲಾಗಿದೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಹನುಮಂತಪ್ಪ ಅವರು ಸಭೆಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ನೂತನವಾಗಿ ಕೃಷಿ ಎಂಜಿನಿಯರಿಂಗ್ ನಿರ್ದೇಶನಾಲಯ ಸ್ಥಾಪಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು ಸರ್ಕಾರದಲ್ಲಿ ಪರಿಶೀಲನೆಯ ಹಂತದಲ್ಲಿದೆ ಎಂಬುದಾಗಿ ಭರವಸೆ ಸಂಖ್ಯೆ 8872ಕ್ಕೆ ರಾಯಚೂರ ಕೃಷಿ ವಿವಿಯಿಂದ ಅನುಪಾಲನಾ ವರದಿ ಸಲ್ಲಿಸಲಾಗಿದೆ ಎಂದು ಕುಲಪತಿಗಳು ಮಾಹಿತಿ ನೀಡಿದರು.

ರಾಯಚೂರ ಕೃಷಿ ವಿಶ್ವವಿದ್ಯಾಲಯ ರಾಯಚೂರ ನಗರದ ಹೃದಯಭಾಗದಲ್ಲಿದೆ. ಇದು ಇಡೀ ನಗರಕ್ಕೆ ಹೆಮ್ಮೆಯ ತಾಣ ಅನಿಸಿದೆ. ಓದುವುದಕ್ಕೆ ಅಷ್ಟೇ ಅಲ್ಲ; ನಗರದ ಅನೇಕ ನಿವಾಸಿಗಳ ವಾಯುವಿಹಾರದ ತಾಣವಾಗಿದೆ. ಇದನ್ನು ಕಾಪಾಡಬೇಕು. ಸುಮಾರು ವರ್ಷಗಳಿಂದ ಇಲ್ಲಿ ಸೇವೆ ಸಲ್ಲಿಸಿದವರು ತಮಗೆ ಸಹಾಯಕ ಪ್ರಾಧ್ಯಾಪಕರನ್ನಾಗಿ, ಸಹ ಪ್ರಾಧ್ಯಾಪಕರನ್ನಾಗ ನೇಮಿಸಿಕೊಂಡಿಲ್ಲ ಎಂದು ಕೋರ್ಟಗೆ ಹೋದವರೊಂದಿಗೆ ಮಾತನಾಡಿ ಅವರ ಮನವೊಲಿಸಿ ಅವಕಾಶವಿದ್ದಲ್ಲಿ ಅವರನ್ನು ನೇಮಿಸಿಕೊಳ್ಳಲು ಪುನಃ ಪರಿಶೀಲಿಸಬೇಕು. ಪೂರ್ಣ ಪ್ರಮಾಣದಲ್ಲಿ ನೌಕರರು ಸಿಬ್ಬಂದಿ ಇದ್ದಾಗಲೇ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ವಿಶ್ವ ವಿದ್ಯಾಲಯ ಉಳಿಯುತ್ತದೆ. ಹಣಕಾಸಿನ ನೆರವು ಬೇಕಿದ್ದಲ್ಲಿ ತಿಳಿಸಬೇಕು ಎಂದು ಇದೆ ವೇಳೆ ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಮಂಜುನಾಥ ಭಂಡಾರಿ ಹಾಗೂ ಕೆ.ಎಸ್.ನವೀನ್ ಅವರು ಸಲಹೆ ಮಾಡಿದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ಹಾಗೂ ವಿಧಾನ ಪರಿಷತ್ ಶಾಸಕರಾದ ನಿರಾಣಿ ಹನುಮಂತಪ್ಪ ರುದ್ರಪ್ಪ, ಪ್ರತಾಪ ಸಿಂಹ ನಾಯಕ ಕೆ., ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲ ಸಚಿವರಾದ ಡಾ.ಕೆ.ಆರ್.ದುರ್ಗೇಶ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಜಿ, ಜಂಟಿ ಕೃಷಿ ನಿರ್ದೇಶಕರಾದ ಜಯಪ್ರಕಾಶ ಟಿ.ಸಿ ಹಾಗೂ ಇನ್ನೀತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande