ತರಬೇತಿ ಅವಧಿ ಜೂನ್ 18ರವರೆಗೆ ವಿಸ್ತರಣೆ
ರಾಯಚೂರು, 12 ಜೂನ್ (ಹಿ.ಸ.) : ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟದ ಭಾಗದ 08 ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪ್ರಚಾರ ಪಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್
ತರಬೇತಿ ಅವಧಿ ಜೂನ್ 18ರವರೆಗೆ ವಿಸ್ತರಣೆ


ರಾಯಚೂರು, 12 ಜೂನ್ (ಹಿ.ಸ.) :

ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟದ ಭಾಗದ 08 ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪ್ರಚಾರ ಪಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಒಂದು ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಯ ಅವಧಿಯನ್ನು ಜೂನ್ 18ರವರೆಗೆ ವಿಸ್ತರಣೆ ಮಾಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಮೊದಲು 28.04.2025ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಕಡಿಮೆ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿರುವುದರಿಂದ ರಾಯಚೂರು ಜಿಲ್ಲೆಯ ಅಭ್ಯರ್ಥಿಗಳು ಈ ಯೋಜನೆಯ ಸದುಪಯೋಗ ಪಡೆಯಲು ಅರ್ಜಿಗಳನ್ನು ಸ್ವೀಕರಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಜಾಕೆಟ್ ಹಾಗೂ ಒಂದು ಜೊತೆ ಸ್ಪೋರ್ಟ್ಸ್ ಶೂ ಒದಗಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಜಿಲ್ಲೆಗೆ ಪರಿಶಿಷ್ಟ ಜಾತಿ-11 ಹಾಗೂ ಪಂಗಡದ-09 ಗುರಿ ನಿಗದಿಪಡಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಂದ್ರ ಜಲ್ದಾರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande