ಕಠ್ಮಂಡು, 13 ಜೂನ್ (ಹಿ.ಸ.) :
ಆ್ಯಂಕರ್ : ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಅಪಘಾತದ ಕುರಿತು ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್, ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ವಿದೇಶಾಂಗ ಸಚಿವಾಲಯಗಳು ತೀವ್ರ ದುಃಖ ವ್ಯಕ್ತಪಡಿಸಿವೆ.
ಪ್ರಧಾನಿ ಓಲಿ ಅವರು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಂತಾಪ ಸಂದೇಶ ಕಳುಹಿಸಿ, ಸಾವನ್ನಪ್ಪಿದವರ ಕುಟುಂಬಗಳಿಗೆ ಮತ್ತು ಭಾರತದ ಜನತೆಗೆ ಸಹಾನುಭೂತಿ ವ್ಯಕ್ತಪಡಿಸಿದರು. ಈ ದುಃಖದ ವೇಳೆಯಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಓಲಿ ತಿಳಿಸಿದ್ದಾರೆ.
ನೇಪಾಳ ವಿದೇಶಾಂಗ ಸಚಿವಾಲಯವೂ ಅಧಿಕೃತ ಹೇಳಿಕೆ ಮೂಲಕ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದು, ಅಪಘಾತವನ್ನು ದುರಂತಮಯ ಘಟನೆ ಎಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa