ಜೂನ್ 25ರಂದು ನಾನಾ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ರಾಯಚೂರು, 13 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಮಿದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮಯಡಿ ಸಾರ್ವಜನಿಕ ಹಿತದೃಷ್ಠಿಯಿಂದ ಗುತ್ತಿಗೆ ಆಧಾರದ ಮೇಲೆ ನಾನಾ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರ
ಜೂನ್ 25ರಂದು ನಾನಾ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ


ರಾಯಚೂರು, 13 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮಿದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮಯಡಿ ಸಾರ್ವಜನಿಕ ಹಿತದೃಷ್ಠಿಯಿಂದ ಗುತ್ತಿಗೆ ಆಧಾರದ ಮೇಲೆ ನಾನಾ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ನೇರ ಸಂದರ್ಶನದಲ್ಲಿ ನ್ಯೂರಾಲಜಿಸ್ಟ್, ಫಿಸಿಸಿಯನ್, ವೈದ್ಯಕೀಯ ಅಧಿಕಾರಿ-01, ಶುಶ್ರೂಷಕರು-01, ಫಿಜಿಯೋಥೆರಪಿಸ್ಟ್-01, ಸ್ಪೀಚ್ ಥೆರಪಿಸ್ಟ್-01, ಕ್ಲಿನಿಕಲ್ ಸೈಕಾಲಜಿಸ್ಟ್-01, ಜಿಲ್ಲಾ ಸಂಯೋಜಕರು-01, ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ಜೂನ್ 25ರ ಬೆಳಿಗ್ಗೆ 10:30 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಗಳ ಕಚೇರಿಯ ಕಾರ್ಯಲಯದಲ್ಲಿ ನೇರ ಸಂದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕುಷ್ಠರೋಗ ನಿವಾರಣ ಅಧಿಕಾರಿಗಳ ಕಾರ್ಯಲಯ ವಿಭಾಗಕ್ಕೆ ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande