ರೈತರು ವೈಜ್ಞಾನಿಕ ಕೃಷಿ ನಡೆಸಿ ಹೆಚ್ಚಿನ ಇಳುವರಿ ಪಡೆಯಿರಿ : ಡಿಸಿ ಪ್ರಶಾಂತ ಕುಮಾರ್ ಮಿಶ್ರಾ
ಬಳ್ಳಾರಿ, 13 ಜೂನ್ (ಹಿ.ಸ.) : ಆ್ಯಂಕರ್ : ರೈತರು ಮಣ್ಣಿನ ಫಲವತ್ತತೆ ಆಧರಿಸಿ ವೈಜ್ಞಾನಿಕವಾಗಿ ಬೆಳೆ ಪದ್ದತಿಯನ್ನು ಅನುಸರಿಸಿ ಹೆಚ್ಚಿನ ಇಳುವರಿ ಪಡೆಯಲು ಆಧುನಿಕ ಕೃಷಿಯನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗ
ರೈತರು ವೈಜ್ಞಾನಿಕ ಕೃಷಿ ನಡೆಸಿ ಹೆಚ್ಚಿನ ಇಳುವರಿ ಪಡೆಯಿರಿ ; ಡಿಸಿ ಪ್ರಶಾಂತ ಕುಮಾರ್ ಮಿಶ್ರಾ


ರೈತರು ವೈಜ್ಞಾನಿಕ ಕೃಷಿ ನಡೆಸಿ ಹೆಚ್ಚಿನ ಇಳುವರಿ ಪಡೆಯಿರಿ ; ಡಿಸಿ ಪ್ರಶಾಂತ ಕುಮಾರ್ ಮಿಶ್ರಾ


ರೈತರು ವೈಜ್ಞಾನಿಕ ಕೃಷಿ ನಡೆಸಿ ಹೆಚ್ಚಿನ ಇಳುವರಿ ಪಡೆಯಿರಿ ; ಡಿಸಿ ಪ್ರಶಾಂತ ಕುಮಾರ್ ಮಿಶ್ರಾ


ಬಳ್ಳಾರಿ, 13 ಜೂನ್ (ಹಿ.ಸ.) :

ಆ್ಯಂಕರ್ : ರೈತರು ಮಣ್ಣಿನ ಫಲವತ್ತತೆ ಆಧರಿಸಿ ವೈಜ್ಞಾನಿಕವಾಗಿ ಬೆಳೆ ಪದ್ದತಿಯನ್ನು ಅನುಸರಿಸಿ ಹೆಚ್ಚಿನ ಇಳುವರಿ ಪಡೆಯಲು ಆಧುನಿಕ ಕೃಷಿಯನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಜಿಲ್ಲಾ ಕಾಟನ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕ, ಬಳ್ಳಾರಿ ಎಪಿಎಂಸಿ ವರ್ತಕರ ಸಂಘ, ಮತ್ತು ಹತ್ತಿ ಬೆಳೆಯುವ ರೈತರ ಸಮೂಹ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಉಚಿತ ಆಸ್ಪತ್ರೆಯ ಮುಂಭಾಗದಲ್ಲಿ ಶುಕ್ರವಾರ ನಡೆದ `ರೈತರ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಸಕಾಲಿಕವಾಗಿ - ನಿರೀಕ್ಷೆಗಿಂತ ದೊಡ್ಡ ಪ್ರಮಾಣದಲ್ಲಿ - ದೂರದೃಷ್ಟಿಯ ರೈತರ ಮೇಳವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಈ ವಿಚಾರವನ್ನು ಚಿಂತಿಸಿ, ಮೇಳವನ್ನು ಏರ್ಪಡಿಸಿ ಯಶಸ್ವಿಗೊಳಿಸಲು ಶ್ರಮಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳು. ಈ ಮೇಳವು ಅರ್ಥಪೂರ್ಣವಾಗಿದೆ ಎಂದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು ಪ್ರಾಸ್ತಾವಿಕ ಭಾಷಣ ಮಾಡಿ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು, ನಮ್ಮ ದೇಶದ ಬೆನ್ನೆಲುಬಾಗಿರುವ ರೈತರನ್ನು ಮತ್ತು ಕೃಷಿಯನ್ನು ಅಪಾರವಾಗಿ ಗೌರವಿಸುತ್ತದೆ. ರೈತರಿಲ್ಲದೇ – ಕೃಷಿ ಇಲ್ಲದೇ ಕೈಗಾರಿಕೆಗಳು ಮತ್ತು ಉದ್ಯಮಗಳಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಂಡಿದೆ. ಈ ಕಾರಣಕ್ಕಾಗಿ ನಮ್ಮ ಸಂಸ್ಥೆಯು ರೈತಣ್ಣ ಊಟ, ರೈತಣ್ಣ ಕ್ಲಿನಿಕ್, ರೈತಣ್ಣ ಹಾಸಿಗೆ ಹಾಗೂ ರೈತರ – ಕೃಷಿಕರ ಪರವಾದ ಅನೇಕ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ. ರೈತರು `ರೈತರ ಮೇಳ’ದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿದ್ದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಎಂ. ಸೋಮಸುಂದರ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ರೈತರು ವೈಜ್ಞಾನಿಕವಾಗಿ ಪ್ರಮಾಣೀಕೃತ ಬೀಜಗಳನ್ನು ಆಯ್ಕೆ ಮಾಡಿಕೊಂಡು, ವೈಜ್ಞಾನಿಕ ಪದ್ಧತಿಯಲ್ಲಿ ಬೆಳೆಗಳನ್ನು ಬೆಳೆಯುವ ಮೂಲಕ ಹೆಚ್ಚಿನ ಇಳುವರಿಯನ್ನು ಪಡೆಯಬೇಕು ಎಂದು ಹೇಳಿ, ಸರ್ಕಾರದ ಯೋಜನೆಗಳನ್ನು ವಿವರಿಸಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಸಿ. ಶ್ರೀನಿವಾಸರಾವ್ ಅವರು, ರೈತರು ಈ ಮೇಳದಲ್ಲಿ ಪಡೆಯುವ ಜ್ಞಾನವನ್ನು ಬೀಜ ಬಿತ್ತನೆ, ಬೆಳೆ ನಿರ್ವಹಣೆ ಮತ್ತು ಕಟಾವಿನಲ್ಲಿ ಬಳಕೆ ಮಾಡಿಕೊಳ್ಳುವ ಮೂಲಕ ಸಂಸ್ಥೆಯ ರೈತಪರ ಕಾಳಜಿಗೆ ಪ್ರೋತ್ಸಾಹ ನೀಡಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ರಾಯಚೂರು ಕೆವಿಕೆಯ ಡಾ. ಭೀಮಣ್ಣ ಮತ್ತು ಹೈದರಾಬಾದ್‌ನ ಡಾ. ವೆಂಕಟೇಶ್ ಕುಲಕರ್ಣಿ ಅವರು, ಮಣ್ಣಿನ ಫಲವತ್ತತೆ, ಬೀಜಗಳ ಆಯ್ಕೆ, ವೈಜ್ಞಾನಿಕವಾಗಿ ಬೀಜ ಬಿತ್ತನೆ, ನೀರುಣಿಸುವಿಕೆ, ಆಧುನಿಕ ತಂತ್ರಜ್ಞಾನಗಳ ಬಳಕೆ, ಯಂತ್ರಗಳ ಬಳಕೆ, ಸಂಪ್ರದಾಯಿಕ ಪದ್ಧತಿಯ ಕೃಷಿ ಇನ್ನಿತರೆಗಳ ಕುರಿತು ಸಮಗ್ರವಾಗಿ ಉಪನ್ಯಾಸ ನೀಡಿ, ರೈತರಿಂದ ಅಪಾರ ಮೆಚ್ಚುಗೆ ಪಡೆದರು.

ಬಳ್ಳಾರಿ ಎಪಿಎಂಸಿ ಅಧ್ಯಕ್ಷ ಕಟ್ಟೇಮನಿ ನಾಗೇಂದ್ರ, ಕಾರ್ಯದರ್ಶಿ ಶ್ರೀಹರಿ, ಬಳ್ಳಾರಿ ಜಿಲ್ಲಾ ಕಾಟನ್ ಅಸೋಸಿಯೇಷನ್ ಅಧ್ಯಕ್ಷ ದಂಡಿನ ತಿಪ್ಪೇಸ್ವಾಮಿ, ಬಿಡಿಸಿಸಿ&ಐನ ಹಿರಿಯ ಉಪಾಧ್ಯಕ್ಷರಾದ ಅವ್ವಾರು ಮಂಜುನಾಥ್, ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್. ತಿಮ್ಮನಗೌಡ, ಬಿಡಿಸಿಸಿಐನ ನಿಕಟಪೂರ್ವ ಅಧ್ಯಕ್ಷರಾದ ಬಿ. ಮಹಾರುದ್ರಗೌಡರು, ಹಗರಿ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ರವಿಶಂಕರ್, ಕೃಷಿ ಮಾರಾಟಗಾರರ ನೌಕರರ ಸಂಘದ ಅಧ್ಯಕ್ಷರ ಚೌವ್ಹಾಣ್, ಎಪಿಎಂಸಿ ದಲ್ಲಾಲಿ ವರ್ತಕರ ಸಂಘದ ಅಧ್ಯಕ್ಷ ಅಂದ್ರಾಳ್ ಚಿದಾನಂದಪ್ಪ ಅವರು ವೇದಿಕೆಯಲ್ಲಿದ್ದರು.

ಡಾ. ಶ್ರೀನಿವಾಸರೆಡ್ಡಿ ಅವರು ಕಾರ್ಯಕ್ರಮ ನಿರೂಪಿಸಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು ವಂದಿಸಿದರು. ರಾಯಚೂರಿನ ಪ್ರಗತಿಪರ ರೈತ ಸಿದ್ದನಗೌಡ ಅವರು ರೈತರ ಪರವಾಗಿ ಮಾತನಾಡಿದರು. ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಮತ್ತು ಆಂದ್ರಪ್ರದೇಶದ ಸಾವಿರಾರು ರೈತರು ಈ ಮೇಳದಲ್ಲಿ ಪಾಲ್ಗೊಂಡಿದ್ದರು.

ಇಬ್ರಾಹಿಂಪುರದ `ಚಿಗುರು’ ತಂಡ, ವಿ-ಡ್ರೀಮ್ಸ್ ಕ್ರೀವ್ ತಂಡ, ಇಂದ್ರಾಣಿ ಕಲಾ ಟ್ರಸ್ಟ್, ಗಾಯಕಿ ಪಕೃತ್ರಿರೆಡ್ಡಿ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರೈತರಿಗೆ ಕೃಷಿ ಮತ್ತು ಕೃಷಿಗೆ ಪೂರಕವಾದ ವಿವಿಧ ಯೋಜನೆಗಳ ಮತ್ತು ಉತ್ಪನ್ನಗಳ ಕುರಿತು ಮಾಹಿತಿ ನೀಡಲಿಕ್ಕಾಗಿಯೇ 40 ಕ್ಕೂ ಹೆಚ್ಚಿನ ಸ್ಟಾಲ್‌ಗಳನ್ನು ಅಳವಡಿಸಿ, ಮಾಹಿತಿ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande