ರಾಯಚೂರು, 13 ಜೂನ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಕಲ್ಮಲಾ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜೂನ್ 14ರ ಮಧ್ಯಾಹ್ನ 12 ಗಂಟೆಯಿಂದ ಸಾಯಂಕಾಲ 05 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್