ವಿಮಾನ ಅಪಘಾತ : ಬದುಕುಳಿದ ಏಕೈಕ ವ್ಯಕ್ತಿಯನ್ನು ಭೇಟಿಯಾದ ಮೋದಿ
ಅಹಮದಾಬಾದ್, 13 ಜೂನ್ (ಹಿ.ಸ.) : ಆ್ಯಂಕರ್ : ಅಹಮದಾಬಾದ್‌ನಲ್ಲಿನ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ 265 ಪ್ರಯಾಣಿಕರು ದುರ್ಮರಣಕ್ಕೆ ಒಳಗಾದ ಘಟನೆ ಶೋಕದ ಛಾಯೆ ತರಿಸಿದೆ. ಈ ಅಪಘಾತದಲ್ಲಿ ರಮೇಶ್ ವಿಶ್ವಾಸ್ ಕುಮಾರ್ ಎಂಬ ಒಬ್ಬ ಪ್ರಯಾಣಿಕ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದ
Pm


ಅಹಮದಾಬಾದ್, 13 ಜೂನ್ (ಹಿ.ಸ.) :

ಆ್ಯಂಕರ್ : ಅಹಮದಾಬಾದ್‌ನಲ್ಲಿನ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ 265 ಪ್ರಯಾಣಿಕರು ದುರ್ಮರಣಕ್ಕೆ ಒಳಗಾದ ಘಟನೆ ಶೋಕದ ಛಾಯೆ ತರಿಸಿದೆ. ಈ ಅಪಘಾತದಲ್ಲಿ ರಮೇಶ್ ವಿಶ್ವಾಸ್ ಕುಮಾರ್ ಎಂಬ ಒಬ್ಬ ಪ್ರಯಾಣಿಕ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ.

ಅವರು ಇದೀಗ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿದ್ದು, ರಮೇಶ್ ಅವರ ಆರೋಗ್ಯವನ್ನು ವಿಚಾರಿಸಿದರು ಮತ್ತು ವೈದ್ಯರೊಂದಿಗೆ ಮಾತುಕತೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande