ಅಹಮದಾಬಾದ್, 13 ಜೂನ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದರು.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂತಾಪ ಸಂದೇಶ ಹಂಚಿಕೊಂಡಿರುವ ಅವರು, ದುರಂತವನ್ನು “ಹೃದಯವಿದ್ರಾವಕ” ಎಂದಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಬ್ರಿಟನ್, ಕೆನಡಾ ಮತ್ತು ಪೋರ್ಚುಗಲ್ ನಾಗರಿಕರೂ ಅಪಘಾತದಲ್ಲಿ ಮೃತಪಟ್ಟಿದ್ದು, ಈ ದೇಶಗಳ ವಿದೇಶಾಂಗ ಸಚಿವರೊಂದಿಗೆ ಸಂಪರ್ಕ ಸಾಧಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa