ಜೂ.18 ರಂದು ಪೂರ್ವಭಾವಿ ಸಭೆ
ಕೊಪ್ಪಳ, 13 ಜೂನ್ (ಹಿ.ಸ.) : ಆ್ಯಂಕರ್ : ಜೂನ್ ಹಾಗೂ ಜುಲೈ ಮಾಹೆಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಮಹನೀಯರ ಜಯಂತಿಗಳ ಪೂರ್ವಸಿದ್ದತೆ ಕುರಿತು ಚರ್ಚಿಸಲು ಜೂನ್ 18 ರಂದು ಸಂಜೆ 04 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್
ಜೂ.18 ರಂದು ಪೂರ್ವಭಾವಿ ಸಭೆ


ಕೊಪ್ಪಳ, 13 ಜೂನ್ (ಹಿ.ಸ.) :

ಆ್ಯಂಕರ್ : ಜೂನ್ ಹಾಗೂ ಜುಲೈ ಮಾಹೆಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಮಹನೀಯರ ಜಯಂತಿಗಳ ಪೂರ್ವಸಿದ್ದತೆ ಕುರಿತು ಚರ್ಚಿಸಲು ಜೂನ್ 18 ರಂದು ಸಂಜೆ 04 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.

ಜಿಲ್ಲಾ ಕೇಂದ್ರದಲ್ಲಿ ಜೂನ್ 27 ರಂದು ಶ್ರೀ ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನಾಚರಣೆಯ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಕುರಿತು ಪೂರ್ವಸಿದ್ದತೆ ಕೈಗೊಳ್ಳಲು ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರೊಂದಿಗೆ ಚರ್ಚಿಸಲು ಜೂ.18 ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ವಹಿಸಿಕೊಳ್ಳಲಿದ್ದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯಗಳ ಮುಖಂಡರು ಸಭೆಗೆ ತಪ್ಪದೇ ಹಾಜರಾಗಿ ತಮ್ಮ ಸಲಹೆಗಳನ್ನು ನೀಡಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande