ಕಾಂಗ್ರೆಸ್ ನಡಿಗೆ ಜೈಲಿನಡೆಗೆ : ಬಿಜೆಪಿ ವ್ಯಂಗ್ಯ
ಬೆಂಗಳೂರು, 14 ಜೂನ್ (ಹಿ.ಸ.) : ಆ್ಯಂಕರ್ : ಧಾರವಾಡದ ಮಾಜಿ ಜಿ‌.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಪಾಲಾಗಿದ್ದು, ಕಾಂಗ್ರೆಸ್ ನಡಿಗೆ ಜೈಲಿನಡೆಗೆ ಪ್ರಾರಂಭವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ. ರಾಜಕೀಯವಾಗಿ ಬಿಜೆಪಿಯನ್ನು
Bjp


ಬೆಂಗಳೂರು, 14 ಜೂನ್ (ಹಿ.ಸ.) :

ಆ್ಯಂಕರ್ : ಧಾರವಾಡದ ಮಾಜಿ ಜಿ‌.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಪಾಲಾಗಿದ್ದು, ಕಾಂಗ್ರೆಸ್ ನಡಿಗೆ ಜೈಲಿನಡೆಗೆ ಪ್ರಾರಂಭವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ.

ರಾಜಕೀಯವಾಗಿ ಬಿಜೆಪಿಯನ್ನು ಎದುರಿಸಲಾಗದ ವಿನಯ್ ಕುಲಕರ್ಣಿ ಸುಪಾರಿ ಕೊಟ್ಟು ಬಿಜೆಪಿಯ ಜಿಲ್ಲಾ ಪಂಚಾಯತ್‌ ಸದಸ್ಯನನ್ನು ಕೊಂದ ಗಂಭೀರ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಕುರಿತಂತೆ ಕೊಲೆಗಾರರೇ ತಪ್ಪೊಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕುಮ್ಮಕ್ಕಿನಿಂದ ಕೊಂದಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷವು ರಾಜಕೀಯ ಕಾರಣಕ್ಕೆ ನೆತ್ತರು ಹರಿಸಲು ಸಿದ್ದ ಎಂಬುದನ್ನು ಈ ಮೂಲಕ ಸಾಬೀತುಪಡಿಸಿದೆ‌‌. ಕೇರಳ, ಪಶ್ಚಿಮ ಬಂಗಾಳದ ರಾಜಕೀಯ ಸೂತ್ರವನ್ನು ರಾಜ್ಯದಲ್ಲಿ ಜಾರಿ ಮಾಡಲು ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಪಕ್ಷ ಹೊರಟಿದೆ‌ ಎಂದು ಬಿಜೆಪಿ ಆರೋಪಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande