ವಿಮಾನ ದುರಂತದ ಸಮಗ್ರ ತನಿಖೆ : ಪ್ರಹ್ಲಾದ ಜೋಶಿ
ಕಲಬುರಗಿ, 14 ಜೂನ್ (ಹಿ.ಸ.) : ಆ್ಯಂಕರ್ : ಅಹಮದಾಬಾದ್ ವಿಮಾನ ದುರಂತ ದುರದೃಷ್ಟಕರ ಅವಘಡ. ಈ ದುರ್ಘಟನೆಯಲ್ಲಿ ಅನೇಕರ ಸಾವು ಸಂಭವಿಸಿರುವುದು ತೀವ್ರ ದುಃಖ ತರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ವಿಮಾನ ದುರಂತ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಡಿಜಿ
Joshi


ಕಲಬುರಗಿ, 14 ಜೂನ್ (ಹಿ.ಸ.) :

ಆ್ಯಂಕರ್ : ಅಹಮದಾಬಾದ್ ವಿಮಾನ ದುರಂತ ದುರದೃಷ್ಟಕರ ಅವಘಡ. ಈ ದುರ್ಘಟನೆಯಲ್ಲಿ ಅನೇಕರ ಸಾವು ಸಂಭವಿಸಿರುವುದು ತೀವ್ರ ದುಃಖ ತರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ವಿಮಾನ ದುರಂತ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಡಿಜಿಸಿಎ ಸಮಗ್ರ ತನಿಖೆ ನಡೆಸಲಿದೆ. ಭವಿಷ್ಯದಲ್ಲಿ ಇಂಥ ಅವಘಡಗಳು ಘಟಿಸದಂತೆ ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭಗವಂತ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಕೇಂದ್ರ ಸರ್ಕಾರ, ವಿಮಾ ಕಂಪನಿ ಮತ್ತು ವಿಮಾನ ಸಂಸ್ಥೆಗಳಿಂದ ಸಮರ್ಪಕ ಪರಿಹಾರ ನೀಡಲಾಗುತ್ತದೆ. ಅಲ್ಲದೇ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande