ಆರೋಗ್ಯ ಕ್ಷೇತ್ರದಲ್ಲಿ ಕಲ್ಯಾಣದ ಸಾಧನೆ ಅದ್ವಿತೀಯ : ಡಿ.ಕೆ.ಶಿವಕುಮಾರ್
ಯಾದಗಿರಿ, 14 ಜೂನ್ (ಹಿ.ಸ.) : ಆ್ಯಂಕರ್ : ಕಲ್ಯಾಣದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ದಿಕ್ಕು ಬದಲಿಸಿ, ರಾಜ್ಯಕ್ಕೆ ಹೊಸ ಸಂದೇಶ ನೀಡಿದ್ದೇವೆ ಎಂದು ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ''ಆರೋಗ್
Dks


ಯಾದಗಿರಿ, 14 ಜೂನ್ (ಹಿ.ಸ.) :

ಆ್ಯಂಕರ್ : ಕಲ್ಯಾಣದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ದಿಕ್ಕು ಬದಲಿಸಿ, ರಾಜ್ಯಕ್ಕೆ ಹೊಸ ಸಂದೇಶ ನೀಡಿದ್ದೇವೆ ಎಂದು ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ 'ಆರೋಗ್ಯ ಆವಿಷ್ಕಾರ' ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಬೆಂಗಳೂರು ನಗರ ಬಿಟ್ಟರೆ ಈ ಭಾಗ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯಲ್ಲಿ ಎರಡನೇ ಸ್ಥಾನದಲ್ಲಿದೆ ಎನ್ನುವುದು ಹೆಮ್ಮೆಯ ವಿಚಾರ. ರಾಹುಲ್ ಗಾಂಧಿಯವರು ಹಿಂದೆ ಇಲ್ಲಿಗೆ ಭೇಟಿ ನೀಡಿದಾಗ ಕೊಟ್ಟ ಮಾತಿನಂತೆ, ಖರ್ಗೆಯವರು ಹಾಗೂ ದಿ.ಧರ್ಮಸಿಂಗ್‌ ಅವರ ಮುಖಂಡತ್ವ, ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ 371ಜೆ ವಿಶೇಷಾಧಿಕಾರ ಪಡೆದಿರುವ ಈ ಭಾಗದ ಜನತೆ ಭಾಗ್ಯಶಾಲಿಗಳು ಎಂದರು.

ಕೇವಲ ಗ್ಯಾರಂಟಿಗಳ ಬಗ್ಗೆ ನಾವು ಮಾತನಾಡುತ್ತಿಲ್ಲ ವಿರೋಧ ಪಕ್ಷದವರು ಎಷ್ಟೇ ಟೀಕೆ ಮಾಡಿದರೂ, ಜನರ ಭಾವನೆಗಳ ಮೇಲಲ್ಲ, ಬದುಕಿನ ಮೇಲೆ ರಾಜಕೀಯ ಮಾಡುತ್ತಾ ಕಲ್ಯಾಣದಲ್ಲಿ ಅಭಿವೃದ್ಧಿಯ ರಥ ಎಳೆಯುತ್ತಿದ್ದೇವೆ. ʼಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳುʼ ಎಂಬ ಧ್ಯೇಯದೊಂದಿಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಹಿಂದುಳಿದವರು, ಅಬಲರಿಗೆ ಸಾಮಾಜಿಕ ನ್ಯಾಯ ಕೊಡಬೇಕೆಂದು ಖರ್ಗೆಯವರು ಹೋರಾಡುತ್ತಿದ್ದಾರೆ. ಹಿಂದುಳಿದ ಜನಾಂಗಗಳ ಏಳ್ಗೆಗೆಂದು ಯಾವುದೇ ಕಾರ್ಯಕ್ರಮ ರೂಪಿಸಿದರೂ ಅದಕ್ಕೆ ಬಿಜೆಪಿಗರು ಅಪಸ್ವರ ಎತ್ತುತ್ತಾರೆ. ಆದರೂ, ನಮ್ಮ ನಾಯಕರುಗಳಾದ ರಾಹುಲ್‌ ಗಾಂಧಿಯವರ ಚಿಂತನೆ, ಮಲ್ಲಿಕಾರ್ಜುನ ಖರ್ಗೆಯವರ ನಾಯಕತ್ವದಲ್ಲಿ ಮತ್ತೆ ಶೈಕ್ಷಣಿಕ- ಸಾಮಾಜಿಕ ಸಮೀಕ್ಷೆ ನಡೆಸುತ್ತಿದ್ದೇವೆ. ಇದು ಎಲ್ಲಾ ಸಮುದಾಯಕ್ಕೂ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಗಣತಿ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande