ದಾವಣಗೆರೆ, 15 ಜೂನ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ನಿಂದ ಜೂನ್ 16 ರಂದು ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ನಗರದ ಹಲವೆಡೆ ವಾಹನ ನಿಲುಗಡೆ ಸ್ಥಳ ಬದಲಾವಣೆ ಹಾಗೂ ಸಂಚಾರ ಮಾರ್ಗವನ್ನು ಬದಲಾಯಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾದರಸ್ವಾಮಿ ಆದೇಶ ಹೊರಡಿಸಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa