ಬೆಂಗಳೂರು, 15 ಜೂನ್ (ಹಿ.ಸ.) :
ಆ್ಯಂಕರ್ : ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಬೆಟ್ಟಲಸೂರು ಗ್ರಾಮ ಪಂಚಾಯಿತಿ ಸದಸ್ಯ ತರಹುಣಸೆ ಗ್ರಾಮದ ರಾಜಣ್ಣ ಹಾಗೂ ಸುಗ್ಗಟ್ಟು ಗ್ರಾಮದ ಕಾಂಗ್ರೆಸ್ ಮುಖಂಡ ವೀರಣ್ಣ, ಗಜೇಂದ್ರ, ಸುನೀಲ ಯಾದವ್ ಹಾಗೂ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಹೆಚ್.ಸಿ.ತಮ್ಮೇಶ್ ಗೌಡ , ಬ್ಯಾಟರಾಯನಪುರ ಮಂಡಲ ಅಧ್ಯಕ್ಷ ಹನುಮಂತ ಗೌಡ , ಮೋರ್ಚಾದ ಎಲ್ಲಾ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa