ಬೆಂಗಳೂರು, 15 ಜೂನ್ (ಹಿ.ಸ.) :
ಆ್ಯಂಕರ್ : ಆರ್ಸಿಬಿ ಅಭಿಮಾನಿಗಳ ಗೆಲುವು ಸಂಭ್ರಮದ ವೇಳೆ ನಡೆದ ನೂಕುನುಗ್ಗಲಿನಲ್ಲಿ ಹನ್ನೊಂದು ಮಂದಿ ಸಾವನ್ನಪ್ಪಿದ ದುರ್ಘಟನೆಯ ಹಿನ್ನೆಲೆಯಲ್ಲಿ, ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನ ಜಂಗುಳಿ ನಿಯಂತ್ರಣ ಕುರಿತಂತೆ ಗಂಭೀರ ಚಿಂತೆ ವ್ಯಕ್ತವಾಗಿದೆ.
ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಅರ್ಜಿ ಸಲ್ಲಿಸಿ, ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಕಾನೂನು ಬಾಹಿರವಾಗಿ ಸ್ಟೇಡಿಯಂ ಬಳಕೆ ಮಾಡುತ್ತಿರುವುದರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಅವರು ತಮ್ಮ ಅರ್ಜಿಯಲ್ಲಿ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆಗಳ ಪ್ರಕಾರ ಕ್ರೌಡ್ ಮ್ಯಾನೇಜ್ಮೆಂಟ್ ಕಡ್ಡಾಯವಾಗಿ ಪಾಲನೆ ಆಗಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa