ಸ್ಕೌಟ್-ಗೈಡ್ಸ್ ಮಕ್ಕಳಿಗೆ ಸರ್ಕಾರದಿಂದ ಸಮವಸ್ತ್ರ ಹಂಚಿಕೆ
ರಾಯಚೂರು, 15 ಜೂನ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಶಾಂತಿ, ಶಿಸ್ತು, ತ್ಯಾಗದ ಜೊತೆಗೆ ನಿಸ್ವಾರ್ಥ ಸೇವೆ ಮಾಡುವಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತದೆ. ಸ್ಕೌಟ್ಸ್ ಗೈಡ್ಸ್ ನ ರಾಜ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ಅವರು ಅನೇಕ ತ್ಯಾಗಗಳನ್ನು ಮಾಡುವ ಮೂಲಕ ಜನಪರ ಸೇ
ಸ್ಕೌಟ್-ಗೈಡ್ಸ್ ಮಕ್ಕಳಿಗೆ ಸರ್ಕಾರದಿಂದ ಸಮವಸ್ತ್ರ ಹಂಚಿಕೆಗೆ ಪ್ರಯತ್ನ- ಸಚಿವ ಎನ್ಎಸ್ ಬೋಸರಾಜು


ಸ್ಕೌಟ್-ಗೈಡ್ಸ್ ಮಕ್ಕಳಿಗೆ ಸರ್ಕಾರದಿಂದ ಸಮವಸ್ತ್ರ ಹಂಚಿಕೆಗೆ ಪ್ರಯತ್ನ- ಸಚಿವ ಎನ್ಎಸ್ ಬೋಸರಾಜು


ರಾಯಚೂರು, 15 ಜೂನ್ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಶಾಂತಿ, ಶಿಸ್ತು, ತ್ಯಾಗದ ಜೊತೆಗೆ ನಿಸ್ವಾರ್ಥ ಸೇವೆ ಮಾಡುವಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತದೆ. ಸ್ಕೌಟ್ಸ್ ಗೈಡ್ಸ್ ನ ರಾಜ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ಅವರು ಅನೇಕ ತ್ಯಾಗಗಳನ್ನು ಮಾಡುವ ಮೂಲಕ ಜನಪರ ಸೇವೆಯಲ್ಲಿ ತೊಡಗಿದ್ದಾರೆ. ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಬಲವರ್ಧನೆಗಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸಿ ಮಕ್ಕಳಿಗೆ ಸರ್ಕಾರದ ವತಿಯಿಂದ ಸಮವಸ್ತ್ರ ಕೊಡಿಸಲು ಚರ್ಚಿಸಲಾಗುವುದು ಎಂದು ಸ್ಕೌಟ್ಸ್ ಗೈಡ್ಸ್ ನ ಜಿಲ್ಲಾ ಅದ್ಯಕ್ಷರು ಮತ್ತು ಸಚಿವರಾದ ಎನ್ಎಸ್ ಬೋಸರಾಜು ಅವರು ತಿಳಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆಗಳ ಕರ್ನಾಟಕ ಜಿಲ್ಲಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಣ್ಣ ನೀರಾವರಿ‌ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಹಾಗೂ ರಾಯಚೂರು ಲೋಕಸಭೆ ಸಂಸದರಾದ ಜಿ ಕುಮಾರ ನಾಯಕ ಅವರು ಭಾಗವಹಿಸಿ ಮಾತನಾಡಿದರು.

ಜಿಲ್ಲೆಯ ತಾಲೂಕುಗಳಲ್ಲಿ ಸಮಿತಿಗಳ ಬೇಡಿಕೆಯಂತೆ ನಿವೇಶನ ಹಾಗೂ ಕಾರ್ಯಾಲಯಗಳ ಕಟ್ಟಡ ನಿರ್ಮಾಣಕ್ಕೆ ಸರ್ಕಾದಿಂದ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಸ್ಕೌಟ್ ಗೈಡ್ಸ್ ನ ರಾಜ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ಅವರು ಮಾತನಾಡಿ, ಸಚಿವರಾದ ಎನ್ಎಸ್ ಬೋಸರಾಜು ಅವರು ಬಹಾಳ ಸರಳ ಸಜ್ಜನಿಕೆ ರಾಜಕಾರಣಿಗಳು. ಧರಂ ಸಿಂಗ್ ಸರ್ಕಾರದಲ್ಲಿ ರಾಜಕೀಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದಾಗ ನಾನು ಅವರನ್ನು ಹತ್ತಿದಿಂದ ಕಂಡಿದ್ದೇನೆ. ಏನನ್ನು ನಿರೀಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ನಮ್ಮ ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಈ ಮಟ್ಟಕ್ಕೆ ಬೇಳೆಯಲು ಅವರ ಸಹಾಯ ಸಹಕಾರವಿದೆ ಎಂದು ತಿಳಿಸಿದರು.

ನಂತರ ಸಂಸದರಾದ ಜಿ ಕುಮಾರ ನಾಯಕ ಅವರು ಮಾತನಾಡಿ, ನಾನು ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಸ್ಕೌಟ್ಸ್ ಗೈಡ್ಸ್ ಕಾರ್ಯಾಲಯ ನಿರ್ಮಾಣಕ್ಕೆ ಭೂಮಿ ಹಸ್ತಾಂತರಿಸಿದ್ದನ್ನು ನೆನಪಿಸಿ ಪ್ರಸ್ಥಾಪಿಸಿದ್ದು ಬಹಾಳ ಸಂತೋಷವಾಗಿದೆ. ಸ್ಕೌಟ್ಸ್ ಗೈಡ್ಸ್ ನ ಮಕ್ಕಳಿಗೆ ಶೈಕ್ಷಣಿಕ ಹಾಗೂ ಉದ್ಯೋಗಗಳಲ್ಲಿ ಮೀಸಲಾತಿಗಾಗಿ ಸಂಸತ್ ನಲ್ಲಿ ಪ್ರಸ್ತಾಪಿಸಿ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಭಾರತ ಸ್ಕೌಟ್ ಗೈಡ್ಸ್ ನ ಬಸವರಾಜ ಬೋರಡ್ಡಿ, ಮಲ್ಲೇಶ್ವರಿ‌ ಜುಜಾಯಿ, ಪರಶುರಾಮ್ ಹಾಗೂ ನಾನಾ ತಾಲೂಕಿನ ಅದ್ಯಕ್ಷರುಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande