ಕಲಬುರಗಿ, 15 ಜೂನ್ (ಹಿ.ಸ.) :
ಆ್ಯಂಕರ್ : ದಲಿತ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಬ್ಲೂಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಕುತೂಹಲಕಾರಿ ಹೇಳಿಕೆಯೊಂದನ್ನ ನೀಡಿದ್ದಾರೆ. ಈ ಕುರಿತು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ದಲಿತ ಮುಖ್ಯಮಂತ್ರಿ ಪ್ರಸ್ತಾವನೆ ಸದ್ಯ ಚರ್ಚೆಯಲ್ಲಿ ಇಲ್ಲ. ಕಳೆದ ಒಂದು ವರ್ಷದಿಂದ ಆ ವಿಚಾರ ಚರ್ಚೆಗೆ ಪುಲ್ ಸ್ಟಾಪ್ ಬಿದ್ದಿದೆ. ಈ ಅವಧಿಯಲ್ಲಿ ದಲಿತ ಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಇಲ್ಲ. ಮುಂದಿನ ಅವಧಿಯಲ್ಲಿ ನೋಡೋಣ ಎನ್ನುವ ಮೂಲಕ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬಿಸಿದ್ದಾರೆ.
ಇನ್ನು ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಜಿ.ಎಸ್.ಟಿ ಹಣದಲ್ಲಿ ತಾರತಮ್ಯ ವಿಚಾರದ ಕುರಿತು ಮಾತನಾಡಿದ ಅವರು, ಕೇಂದ್ರಕ್ಕೆ ನಾವು 2 ಲಕ್ಷ ಕೋಟಿ ಜಿಎಸ್ ಟಿ ಹಣ ಕೊಡುತ್ತೆವೆ. ಹೀಗಾಗಿ ಅದರ ಅರ್ಧ ಹಣವಾದ್ರು ಕೇಂದ್ರ ಸರ್ಕಾರ ನಮಗೆ ಕೊಡಬೇಕು. ಸದ್ಯ 37 ಸಾವಿರ ಕೋಟಿ ಜಿಎಸ್ ಟಿ ಹಣ ಮಾತ್ರ ನಮ್ಮಗೆ ಕೊಟ್ಟಿದ್ದಾರೆ. ನಮ್ಮ ಹಣ ಯಮುನಾ ಗಂಗಾ ಹೈವೆ ಎಕ್ಸಪ್ರೇಸ್ ಗೆ ಬಳಕೆ ಮಾಡುತ್ತಿದ್ದಾರೆ. ನಮ್ಮ ತೆರಿಗೆ ಹಣದಿಂದ ಯುಪಿ, ಬಿಹಾರ ರಾಜ್ಯಗಳಲ್ಲಿ ರಸ್ತೆ ಆಗುತ್ತಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಹಿಂದೂಸ್ತಾನ್ ಸಮಾಚಾರ್ / Samarth biral