ಶಿವಮೊಗ್ಗ, 15 ಜೂನ್ (ಹಿ.ಸ.) :
ಆ್ಯಂಕರ್ : ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು 2025–26 ನೇ ಸಾಲಿನ ಅರಿವು ಶೈಕ್ಷಣಿಕ ಸಾಲ, ವಿದೇಶಿ ಶಿಕ್ಷಣ ಸಹಾಯ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ, ಸ್ವಾವಲಂಬಿ ಸಾರಥಿ ಮೊದಲಾದ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.
ಹಿಂದುಳಿದ ವರ್ಗದ ಪ್ರ.1ರ 6(ಎ) ರಿಂದ 6(ಎಕೆ) ವರೆಗೆ ಬರುವ ಅಂಬಿಗ, ಬೆಸ್ತ, ಗಂಗಾಮತ ಮೊದಲಾದ ಜಾತಿಗಳ ಅರ್ಹ ಅಭ್ಯರ್ಥಿಗಳು ಜುಲೈ 4 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಕಳೆದ ಮೂರು ವರ್ಷಗಳಲ್ಲಿ ಇತರೆ ಯೋಜನೆಗಳ ಪ್ರಯೋಜನ ಪಡೆದವರು ಅರ್ಹರಲ್ಲ. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ ಅಥವಾ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa