ಕೋಲಾರ, ೧೫ ಜೂನ್ (ಹಿ.ಸ) :
ಆ್ಯಂಕರ್ : ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಕೋಮುಲ್) ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ಭಾನುವಾರ ಕಾಂಗ್ರೆಸ್ ಬೆಂಬಲಿತ ನಾಲ್ವರು ಅಭ್ಯರ್ಥಿಗಳು ಚುನಾವಣಾಧಿಕಾರಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ರವರಿಗೆ ನಾಮಪತ್ರ ಸಲ್ಲಿಸಿದರು.
ಆಡಳಿತ ಮಂಡಳಿಯ ೧೩ ನಿರ್ದೇಶಕರ ಸ್ಥಾನಗಳಿಗೆ ಜೂನ್ ೨೫ ರಂದು ಚುನಾವಣೆ ನಡೆಯಲಿದ್ದು ಕೋಲಾರ ಈಶಾನ್ಯ ಕ್ಷೇತ್ರದಿಂದ ಸೀಸಂದ್ರ ಗೋಪಾಲಗೌಡ, ಮಾಲೂರು ಟೇಕಲ್ ಕ್ಷೇತ್ರದಿಂದ ಶಾಸಕ ಕೆ.ವೈ ನಂಜೇಗೌಡ, ಮಾಲೂರು ಕಸಬಾದಿಂದ ಎಂ.ಎನ್ ಶ್ರೀನಿವಾಸ್ ಕೋಲಾರ ಮಹಿಳಾ ಮೀಸಲು ದಕ್ಷಿಣ ಕ್ಷೇತ್ರದಿಂದ ಆರ್ ಕಾಂತಮ್ಮ ನಾಮಪತ್ರ ಸಲ್ಲಿಸಿದರು
ಕೋಮುಲ್ ಚುನಾವಣೆಗೆ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊ0ದಿಗೆ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು ಅಭ್ಯರ್ಥಿಗಳ ಪರವಾಗಿ ಶಾಸಕ ಕೊತ್ತೂರು ಜಿ.ಮಂಜುನಾಥ್, ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸಾಥ್ ನೀಡಿದರು
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದ ಜಿಲ್ಲಾ ಪಂಚಾಯತಿ ಕಚೇರಿ ಬಳಿ ಅಭ್ಯರ್ಥಿಗಳ ಬೆಂಬಲಿಗರು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಚಿತ್ರ : ಕೋಲಾರ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಕೋಲಾರ ಈಶಾನ್ಯ ಕ್ಷೇತ್ರದಿಂದ ಗೋಪಾಲಗೌಡ ನಾಮಪತ್ರ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್