ತ್ರಿಶೂರ್, 16 ಜೂನ್ (ಹಿ.ಸ.) :
ಆ್ಯಂಕರ್ : ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಬಣ್ಣ ಸಂಗ್ರಹ ಗೋದಾಮಿನಲ್ಲಿ ಸೋಮವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬಣ್ಣದ ಕೆಮಿಕಲ್ಗಳು ಹೆಚ್ಚಾಗಿ ಸಂಗ್ರಹಗೊಂಡಿದ್ದ ಕಾರಣದಿಂದಾಗಿ ಬೆಂಕಿ ತೀವ್ರವಾಗಿ ಹಬ್ಬಿದೆ.ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆ ನಡೆದ ಬೆನ್ನಲ್ಲೇ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಈವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯದ ಘಟನೆ ವರದಿಯಾಗಿಲ್ಲ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa