ಮಾಸಿಕ ಗೌರವ ಧನ : ಅರ್ಜಿ ಆಹ್ವಾನ
ಕೊಪ್ಪಳ, 16 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡಲು ನಿಗದಿತ ನಮೂನೆಯಲ್ಲಿ ಅರ
ಮಾಸಿಕ ಗೌರವ ಧನ : ಅರ್ಜಿ ಆಹ್ವಾನ


ಕೊಪ್ಪಳ, 16 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡಲು ನಿಗದಿತ ನಮೂನೆಯಲ್ಲಿ ಅರ್ಜಿ ಅಹ್ವಾನಿಸಲಾಗಿದೆ.

ಫಲಾನುಭವಿಗಳು ಕೊಪ್ಪಳ ಜಿಲ್ಲೆಯ ಬಸದಿಗಳು, ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಣಿ ಕಾಯ್ದೆಯನ್ವಯ ಅಥವಾ ಇತರೆ ಸಂಬ0ಧಪಟ್ಟ ಕಾಯ್ದೆಯಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ.6000/- ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ ರೂ.5000/- ಮಾಸಿಕ ಗೌರವ ಧನ ನೀಡಲಾಗುವುದು.

ಸಂಬಂಧಪಟ್ಟ ಆರ್ಚಕರುಗಳು ಅರ್ಜಿಯೊಂದಿಗೆ ಅರ್ಚಕರು/ಗ್ರಂಥಿಗಳ ಭಾವಚಿತ್ರ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ ಪ್ರತಿ, ಅರ್ಚಕರು/ಗ್ರಂಥಿಗಳು ಅವರ ಹುದ್ದೆಗೆ ಸಂಬಂಧಪಟ್ಟ ಧಾರ್ಮಿಕ ವಿದ್ಯಾರ್ಹತೆಯ ಕುರಿತು ದಾಖಲೆ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ಸ್ಥಳೀಯ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ, ಸಂಸ್ಥೆಯವರು ಅರ್ಚಕರುಗಳ ಮಾಹೆವಾರು ಕರ್ತವ್ಯದ ಹಾಜರಾತಿ ಬಗ್ಗೆ ನೀಡಿದ ಸೇವಾ ಪ್ರಮಾಣ ಪತ್ರ ಧೃಡೀಕರಣ ಪತ್ರವನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಜಾದ್ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಇತರೆ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande