ಪುಣೆ, 16 ಜೂನ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದ ಪುಣೆ ಜಿಲ್ಲೆ ಮಾವಲ್ ತಹಸಿಲ್ ವ್ಯಾಪ್ತಿಯ ತಲೆಗಾಂವ್ ಬಳಿಯ ಇಂದ್ರಯಾಣಿ ನದಿಗೆ ಹತ್ತಿರವಿರುವ ಸೇತುವೆ ಕುಸಿದಿದ್ದು, ಇದುವರೆಗೆ ನಾಲ್ವರು ಸಾವಿಗೀಡಾಗಿದ್ದಾರೆ. ಅಪಘಾತದ ವೇಳೆಗೆ ಸೇತುವೆಯ ಮೇಲೆ ಸುಮಾರು 100 ಜನ ಪ್ರವಾಸಿಗರು ಇದ್ದರೆಂದು ವರದಿಯಾಗಿದೆ.
ಅಪಘಾತದ ಬಳಿಕ ಸ್ಥಳಕ್ಕೆ ತಕ್ಷಣ ಧಾವಿಸಿದ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಎರಡು ತಂಡಗಳು ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿವೆ. ಇಲ್ಲಿಯವರೆಗೆ 51 ಜನರನ್ನು ನದಿಯಿಂದ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಗಾಯಗೊಂಡವರಲ್ಲಿ ಎಂಟು ಜನರ ಸ್ಥಿತಿ ಗಂಭೀರವಾಗಿದೆ. ಮೃತರಾಗಿ ಗುರುತಿಸಲಾದವರು ಚಂದ್ರಕಾಂತ್ ಸಾಥ್ಲೆ, ರೋಹಿತ್ ಮಾನೆ, ವಿಹಾನ್ ಮಾನೆಯಾಗಿದ್ದು ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಇನ್ನೂ ಕೆಲವರು ನದಿಯಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಕಾರ್ಯಾಚರಣೆ ಮುಂದುವರೆದಿದೆ.
ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದಾಗಿ ಘೋಷಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa