ಮಳೆ ಹಾನಿ : ತ್ವರಿತ ಕ್ರಮಕ್ಕೆ ಸಚಿವ ಲಾಡ್ ಸೂಚನೆ
ಧಾರವಾಡ, 16 ಜೂನ್ (ಹಿ.ಸ.) : ಆ್ಯಂಕರ್ : ಧಾರವಾಡದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿ ಮಳೆಹಾನಿಯಿಂದ ಉಂಟಾಗುವ ತೊಂದರೆಗಳನ್ನು ಎದುರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವ ಲಾಡ್
Meeting


ಧಾರವಾಡ, 16 ಜೂನ್ (ಹಿ.ಸ.) :

ಆ್ಯಂಕರ್ : ಧಾರವಾಡದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿ ಮಳೆಹಾನಿಯಿಂದ ಉಂಟಾಗುವ ತೊಂದರೆಗಳನ್ನು ಎದುರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಚಿವ ಲಾಡ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಮಳೆ ಹಾನಿ ಪ್ರದೇಶಗಳಿಗೆ ಈಗಾಗಲೇ ಭೇಟಿ ನೀಡಿದ್ದೇನೆ. ಇನ್ನಷ್ಟು ಸ್ಥಳಗಳಿಗೆ ಭೇಟಿ ನಿಗದಿಯಾಗಿದೆ. ಮಳೆಯಿಂದ ಜನರಿಗೆ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕ ಕೋನರೆಡ್ಡಿ, ಸಲೀಂ ಅಹಮದ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಜಿಲ್ಲಾ ಪಂಚಾಯತ್ ಸಿಇಒ ಪಾಟೀಲ್ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande