ತಾಳೆ ಬೆಳೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ
ಹುಬ್ಬಳ್ಳಿ, 17 ಜೂನ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆಬೆಳೆ ಯೋಜನೆಯಡಿ, ತಾಳೆಬೆಳೆ ಹೊಸ ತೋಟ ನಿರ್ಮಾಣ ಮಾಡಿಕೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಆಸಕ್ತಿಯುಳ್ಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್
ತಾಳೆ ಬೆಳೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ


ಹುಬ್ಬಳ್ಳಿ, 17 ಜೂನ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆಬೆಳೆ ಯೋಜನೆಯಡಿ, ತಾಳೆಬೆಳೆ ಹೊಸ ತೋಟ ನಿರ್ಮಾಣ ಮಾಡಿಕೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಆಸಕ್ತಿಯುಳ್ಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ರೈತರು ಜೂನ್ 30 ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಹುಬ್ಬಳ್ಳಿ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಮೊದಲು ಬಂದ ರೈತರಿಗೆ ಆದ್ಯತೆ ಮೇರೆಗೆ ಜೇಷ್ಠತೆ ಅನುಸಾರವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande