ಬೆಂಗಳೂರು, 17 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಬಿಜೆಪಿ ನಾಯಕರು ನಮ್ಮ ರಾಜೀನಾಮೆ ಕೇಳುವ ನೈತಿಕತೆಯ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾದಲ್ಲಿ ಹತ್ಯಾಕಾಂಡ ನಡೆದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ, ವಿಮಾನ ಅಪಘಾತ, ರೈಲ್ವೇ ದುರಂತಗಳು ಸಾಲು ಸಾಲು ನಡೆದು ಎಷ್ಟೋ ಜನ ಬಲಿಯಾಗಿದ್ದಾರೆ, ಮಣಿಪುರ ಕಳೆದ ಕೆಲವು ವರ್ಷಗಳಿಂದ ಹೊತ್ತಿ ಉರಿಯುತ್ತಿದೆ, ಅಲ್ಲಿ ನಿತ್ಯವೂ ಜನ ಸಾಯುತ್ತಿದ್ದರೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸೇತುವೆ ಕುಸಿದು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆಗೆಲ್ಲ ಘಟನೆಯ ಹೊಣೆಗೊತ್ತು ಬಿಜೆಪಿಯವರು ರಾಜೀನಾಮೆ ನೀಡಿದ್ದಾರ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದು, ಹೀಗಾಗಿ ರಾಜ್ಯ ಬಿಜೆಪಿ ನಾಯಕರು ನಮ್ಮ ರಾಜೀನಾಮೆ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದಿದ್ದಾರೆ ಸಿದ್ದರಾಮಯ್ಯ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa