ಬಳ್ಳಾರಿ, 17 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್. ಆಂಜನೇಯಲು ಅವರು ಸಭೆಯ ಅಧ್ಯಕ್ಷತೆವಹಿಸಲಿದ್ದು, ಶಾಸಕರಾದ ನಾರಾ ಭರತರೆಡ್ಡಿ ಮತ್ತು ಜೆ.ಎನ್. ಗಣೇಶ್ ಅವರು ಹಾಲಿ ಅಧ್ಯಕ್ಷರ ವಿರುದ್ಧ ಲಿಖಿತ ದೂರನ್ನು ಸಲ್ಲಿಸಿದ ನಂತರ ನಡೆಯುತ್ತಿರುವ ಸಭೆ ಇದಾಗಿದೆ. ಈ ನಿಟ್ಟಿನಲ್ಲಿ ಈ ಸಭೆಗೆ ಸಾಕಷ್ಟು ಮಹತ್ವವಿದೆ ಎಂದೇ ಹೇಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್