ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರ ಗಮನಕ್ಕೆ
ಗದಗ, 17 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಗದಗ ಜಿಲ್ಲೆಯ ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರಿಗೆ ಗೌರವಧನ ನೀಡಲು ಮತ್ತು ಸಿಖ್ ಮುಖ್ಯ ಗ್ರಂಥಿಗಳು ಹಾಗೂ ಸಹಾಯಕ ಗ್ರಂಥಿಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಮಾಸಿಕ ಗೌರವಧನವನ್ನು ಹೆಚ್ಚಿಸ
ಪೋಟೋ


ಗದಗ, 17 ಜೂನ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಗದಗ ಜಿಲ್ಲೆಯ ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರಿಗೆ ಗೌರವಧನ ನೀಡಲು ಮತ್ತು ಸಿಖ್ ಮುಖ್ಯ ಗ್ರಂಥಿಗಳು ಹಾಗೂ ಸಹಾಯಕ ಗ್ರಂಥಿಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಮಾಸಿಕ ಗೌರವಧನವನ್ನು ಹೆಚ್ಚಿಸಲಾಗಿದ್ದು, ಸದರಿ ಗೌರವಧನ ಪಡೆಯಲು ಅರ್ಹ ಅರ್ಚಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಂಬಂಧಿಸಿದ ಅರ್ಚಕರು ನಿಗದಿತ ನಮೂನೆಯಲ್ಲಿ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಛೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಇಲ್ಲಿ ದೂ : 08372-297494 ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande