ಜಿಟಿಟಿಸಿ ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ, 17 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರವು ನೂತನವಾಗಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹತ್ತನ
ಜಿಟಿಟಿಸಿ ತರಬೇತಿಗಾಗಿ ಅರ್ಜಿ ಆಹ್ವಾನ


ಬಳ್ಳಾರಿ, 17 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರವು ನೂತನವಾಗಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹತ್ತನೇ ತರಗತಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಯುವಕರಿಗೆ ‘ಟೂಲರೂಮ್ ಮಶಿನಿಸ್ಟ್’ ತಾಂತ್ರಿಕ ವೃತ್ತಿ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ.

ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಟರ್ನರ್, ಮಿಲ್ಲರ್, ಗ್ರೈಂಡರ್, ಸಿಎನ್‍ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್‍ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಲಾಗುತ್ತದೆ.

ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ, ಮತ್ತು ಅಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು.

ಸರ್ಕಾರದ ವಿವಿಧ ಯೋಜನೆಯಡಿ “ಮೆಕ್ಯಾನಿಕಲ್–ಕ್ಯಾಡ್/ಕಾಮ್”, “ಎಲೆಕ್ಟ್ರಾನಿಕ್ಸ್- ಅಟೋಮೇಶನ್ ಮನೆ/ಕೈಗಾರಿಕೆ, ಪಿ.ಎಲ್.ಸಿ ಪೆÇ್ರೀಗ್ರಾಮಿಂಗ್, ಅಡ್ವಾನ್ಸ್ ಹೈಡ್ರಾಲಿಕ್ಸ್ ಮತ್ತು ನ್ಯೂಮ್ಯಾಟಿಕ್ಸ್”, “ಎಲೆಕ್ಟ್ರಿಕಲ್- ಮನೆ/ಕೈಗಾರಿಕೆ ಇನ್ಸ್ಟಾಲೇಷನ್, ಸಿಕ್ಯಾಡ್ ಮತ್ತು ಕಂಪ್ಯೂಟರ್ ಸೈನ್ಸ್ - ಕಂಪ್ಯೂಟರ್ ಅಪ್ಲಿಕೇಷನ್ ವಿಭಾಗದ ಉಚಿತ ಮತ್ತು ಪಾವತಿ ತಾಂತ್ರಿಕ ಕೌಶಲ್ಯ ಅಲ್ಪಾವಧಿ ತರಬೇತಿಗಳನ್ನು ಪ್ರಾರಂಭಿಸಲಾಗುತ್ತಿದೆ.

ಕನಿಷ್ಠ 8ನೇ ತರಗತಿ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಐಟಿಐ, ಡಿಪೆÇ್ಲೀಮಾ, ಬಿ.ಇ ಉತ್ತೀರ್ಣರಾದ 16 ರಿಂದ 35 ವಯೋಮಿತಿಯೊಳಗಿನ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಹರು. ತರಬೇತಿ ಪಡೆಯಲು ಆದಾಯದ ಮಿತಿ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‍ಮೆಂಟ್ ನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಐ.ಟಿ.ಐ. ಕ್ಯಾಂಪಸ್) ಅಥವಾ ಮೊ.9972320076, 9620057086 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿಯ ಪ್ರಾಂಶುಪಾಲರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande