ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ : ಶಿವಾನಂದ
ರಾಯಚೂರು, 17 ಜೂನ್ (ಹಿ.ಸ.) : ಆ್ಯಂಕರ್ : ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಘೋಷವಾಕ್ಯದಡಿ ಜೂನ್ 21ರಂದು ಆಚರಿಸಲ್ಪಡುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಹೇಳಿದ್ದಾರೆ. ಜೂನ್ 17ರಂದು ನೂತನ ಜಿಲ್ಲಾಧಿಕಾರಿಗಳ ಕಾರ್
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಶಿವಾನಂದ


ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಶಿವಾನಂದ


ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಶಿವಾನಂದ


ರಾಯಚೂರು, 17 ಜೂನ್ (ಹಿ.ಸ.) :

ಆ್ಯಂಕರ್ : ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಘೋಷವಾಕ್ಯದಡಿ ಜೂನ್ 21ರಂದು ಆಚರಿಸಲ್ಪಡುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಹೇಳಿದ್ದಾರೆ.

ಜೂನ್ 17ರಂದು ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆಯ ನಿಮಿತ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಇಲಾಖೆ, ರಾಯಚೂರು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಆಶ್ರಯದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರ ಬೆಳಗ್ಗೆ 6.30ಕ್ಕೆ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಯೋಗ ಶಿಬಿರ ಆಯೋಜಿಸಲಾಗಿದೆ. 6.45 ರಿಂದ 7 ಗಂಟೆವರೆಗೆ ಧ್ಯಾನ, 7 ಗಂಟೆಯಿಂದ 7.45ರವರೆಗೆ ಯೋಗ ಪ್ರದರ್ಶನ, 8 ರಿಂದ 8.30ರವರೆಗೆ ವೇದಿಕೆಯ ಕಾರ್ಯಕ್ರಮ ನಡೆಯಲಿದೆ. ಇದೆ ವೇಳೆ ಬಹುಮಾನ ವಿತರಣೆ ಮಾಡಲಾಗುತ್ತದೆ ಎಂದರು.

ವಿಶ್ವದಲ್ಲಿ ಸಾರ್ವತ್ರಿಕವಾಗಿ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನ ಎಂದು ಆಯೋಜಿಸಲಾಗುತ್ತಿದೆ. ಅನಾದಿ ಕಾಲದಿಂದಲೂ ಯೋಗ ಸಾಧನೆಗೆ ಅತಿ ಮಹತ್ವವಿದೆ. ಇಂದಿನ ಜಗತ್ತು ದೈಹಿಕ ಮತ್ತು ಮಾನಸಿಕ ಆರೋಗ್ಯದ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಜನಸಾಮಾನ್ಯರನ್ನು ಇದು ತೀವ್ರವಾಗಿ ಕಾಡುತ್ತಿದೆ. ಇದಕ್ಕೆ ಸುಲಭೋಪಾಯ ಯೋಗ ಮಾತ್ರ ಆಗಿದೆ. ದೀರ್ಘಕಾಲದವರೆಗೆ ಆರೋಗ್ಯವಂತರಾಗಿ ಬಾಳಲು ಯೋಗ ಅತ್ಯಂತ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಸ್ವಾಸ್ಥ್ಯ ಸಮಾಜದ ಪರಿಕಲ್ಪನೆಗಾಗಿ ಜಿಲ್ಲಾಡಳಿತ ವತಿಯಿಂದ ಯೋಗ ಶಿಬಿರ ಆಯೋಜಿಸಲಾಗಿದ್ದು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕ ಹಾಗೂ ಯುವತಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸಭೆಯ ಮೂಲಕ ಮನವಿ ಮಾಡಿದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 18ರಂದು ಬೆಳಗ್ಗೆ 9 ಗಂಟೆಗೆ ಮಹಿಳೆಯರು ಮತ್ತು ಪುರುಷರಿಗೆ ವಯೋ ಆಧರಿತ ಯೋಗ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯೋಗ ಕುರಿತು ಪ್ರಬಂಧ ಸ್ಪರ್ಧೆಯನ್ನು ಮಧ್ಯಾಹ್ನ 2 ಗಂಟೆ ವೇಳೆಗೆ ರಾಯಚೂರ ಏಕ್ ಮಿನಾರ್ ಹತ್ತಿರದ ಜಿಲ್ಲಾ ಅಯುಷ್ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ನೋಂದಣಿಗಾಗಿ ಡಾ.ತಿಮ್ಮಪ್ಪ ವಡ್ಡೆಪಲ್ಲಿ ಮೊ:9900778049 ಇವರಿಗೆ ಸಂಪರ್ಕಿಸಲು ತಿಳಿಸಲಾಗಿದೆ. ಜೂನ್ 19ರಂದು ಬೆಳಗ್ಗೆ 7.30 ರಿಂದ ಮಹಾತ್ಮಗಾಂಧಿ ಕ್ರೀಡಾಂಗಣದಿಂದ ಜಿಲ್ಲಾ ಆಯುಷ್ ಆಸ್ಪತ್ರೆವರೆಗೆ ಯೋಗ ಜಾಗೃತಿ ಶಿಬಿರ ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಎನ್.ಸಿ.ಸಿ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಸಂಸ್ಥೆಗಳು, ಆರ್‍ಟಿಪಿಎಸ್/ವೈಟಿಪಿಎಸ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಿಮ್ಸ್ ಮೆಡಿಕಲ್ ಕಾಲೇಜು, ರಾಯಚೂರು ವಿಶ್ವವಿದ್ಯಾಲಯ, ಆರೋಗ್ಯ ಚಿಂತನೆ ಚಾರಿಟೆಬಲ್ ಟ್ರಸ್ಟ್, ಸ್ವಾಮಿ ವಿವೇಕಾನಂದ ಹೋಲಿಸ್ಟಿಕ್ ಹೆಲ್ತ್ ಕೇರ್ ಸೆಂಟರ್, ಶ್ರೀ ಪತಂಜಲಿ ಯೋಗ ಸೇವಾ ಸಮಿತಿ, ರಾಯಚೂರು ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸಹಜ ಸ್ಥಿತಿ ಯೋಗ ಜ್ಞಾನ ಮಂದಿರ, ವ್ಯಕ್ತಿ ವಿಕಾಸ ಕೇಂದ್ರ ಆರ್ಟಿ ಆಫ್ ಲಿವಿಂಗ್, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿದ್ಯಾಲಯ, ರಾಮಕೃಷ್ಣ ಜ್ಞಾನ ಮಂದಿರ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಎಸ್.ಎಸ್.ಎಮ್ ಕಾಲೇಜ್, ನೆಹರು ಯುವ ಕೇಂದ್ರ ಸ್ಕೌಟ್ & ಗೈಡ್ಸ್ ಸಂಸ್ಥೆ, ರೆಡ್ ಕ್ರಾಸ್ ಸಂಸ್ಥೆ, ಭಾರತ ಸೇವಾ ದಳ, ತಾರನಾಥ ಶಿಕ್ಷಣ ಸಂಸ್ಥೆ, ಟ್ಯಾಗೋರ್ ಶಿಕ್ಷಣ ಸಂಸ್ಥೆ, ನವೋದಯ ಶಿಕ್ಷಣ ಸಂಸ್ಥೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ರಾಯಚೂರು, ಬಿ.ಎನ್.ಡಬ್ಲೂ ಪತಂಜಲಿ ಯೋಗ ಪ್ರತಿ ವಡ್ಡೆಪಲ್ಲಿ, ಪತಂಜಲಿ ಯೋಗ ಟ್ರಸ್ಟ್, ಪೂರ್ಣಿಮಾ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ವಂದೆ ಮಾತರಂ ಯುವ ಸಂಘ, ಅನ್ನದಾನಯ್ಯ ಸ್ವಾಮಿ ಯೋಗ ಸನ್ನಿಧಿ, ಜ್ಞಾನ ವಿದ್ಯಾಪೀಠ ಟ್ರಸ್ಟ್ ಹಾಗೂ ಯೋಗ ಆಸಕ್ತ ಖಾಸಗಿ ಶಿಕ್ಷಣ ಸಂಸ್ಥೆಗಳು ಸಹಯೋಗ ನೀಡುತ್ತಿವೆ ಎಂದು ಇದೆ ವೇಳೆ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಶಂಕರಗೌಡ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಶಂಕರಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ ಕೊಟ್ರಬಸಪ್ಪ, ಬಿಇಓ ಪರಶುರಾಮ, ಭಾರತ ಸೇವಾ ದಳದ ಶಿವಕುಮಾರ, ಭಾರತ ಸ್ಕೌಟ್ ಮತ್ತು ಗೈಡ್ಸನ ಮಹಮ್ಮದ್ ಶಫುದ್ದೀನ್, ಸಹಜ ಯೋಗ ಪ್ರತಿಷ್ಠಾನದ ನರಸಯ್ಯ, ಆರ್ಟ್ ಆಫ್ ಲಿವಿಂಗ್‍ನ ಮಲ್ಲಿಕಾರ್ಜುನ ಸ್ವಾಮಿ, ಯೋಗಾ ಫೌಂಡೇಶನ್‍ನ ರಮೇಶ್, ಸಿದ್ಧಾರ್ಥ, ಯೋಗಾ ಅಸೋಸಿಯೇಶನ್‍ನ ಡಾ.ತಿಮ್ಮಯ್ಯ, ವೈಟಿಪಿಎಸ್‍ನ ಗಂಗಾಧರ ಎಂ.ಆರ್., ರವೀಶ್ ಕುಮಾರ ಸೇರಿದಂತೆ ಇನ್ನೀತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande