ಮೈಸೂರು, 17 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು ಮೈಸೂರು ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದಾಗಿ ಕೊಡಗು ಹಾಗೂ ಕೇರಳದ ವಯನಾಡು ಜಿಲ್ಲೆಗಳಲ್ಲಿ ಪ್ರವಾಹದ ಆತಂಕದಿಂದ ಕೆಂಪು ಎಚ್ಚರಿಕೆ ಘೋಷಿಸಲಾಗಿದೆ.
ಕೆ.ಆರ್.ಎಸ್. ಜಲಾಶಯಕ್ಕೆ ಕೊಡಗಿನ ಮಳೆಯಿಂದಾಗಿ ಪ್ರತಿದಿನವೂ 16,936 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಈಗಾಗಲೇ 110.95 ಅಡಿ ನೀರಿನ ಮಟ್ಟ ದಾಖಲಾಗಿದೆ. ಇದರಲ್ಲಿ 32.686 ಟಿಎಂಸಿ ನೀರು ಸಂಗ್ರಹಗೊಂಡಿದ್ದು, ಕೇವಲ 951 ಕ್ಯೂಸೆಕ್ ನೀರನ್ನಷ್ಟೇ ಹೊರಬಿಡಲಾಗುತ್ತಿದೆ.
ಇದೇ ರೀತಿ, ಕಬಿನಿ ಜಲಾಶಯಕ್ಕೆ ವಯನಾಡಿನ ಮಳೆಯಿಂದಾಗಿ 15,849 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 2278.77 ಅಡಿ ನೀರಿನ ಮಟ್ಟವಿದೆ. ಇದರಲ್ಲಿ 16.34 ಟಿಎಂಸಿ ನೀರು ಸಂಗ್ರಹಗೊಂಡಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ, 5,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಈ ಭಾರೀ ಮಳೆಯು ರೈತರಿಗೆ ನೀರಾವರಿ ಹಾಗೂ ಕುಡಿಯುವ ನೀರಿನ ಪೂರೈಕೆಗೆ ಹಿತಕರ ಪರಿಣಾಮ ಬೀರುತ್ತಿದೆ. ಆದರೆ, ಮಳೆ ಮುಂದುವರಿದರೆ ಕೆಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa