ಶಿರಾಡಿ ಘಾಟ್‌ನಲ್ಲಿ ಮಳೆ : ಬೆಂಗಳೂರು–ಮಂಗಳೂರು ಸಂಚಾರಕ್ಕೆ ಅಡ್ಡಿ
ಹಾಸನ, 17 ಜೂನ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್‌ನಲ್ಲಿ ಅಧ್ವಾನ ಉಂಟಾಗಿದೆ. ಗುಡ್ಡದ ಮಣ್ಣು, ಮರಗಳು ಜಾರಿ ಬೀಳುತ್ತಿರುವುದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಪ್ರಯಾಣ
ಶಿರಾಡಿ ಘಾಟ


ಹಾಸನ, 17 ಜೂನ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್‌ನಲ್ಲಿ ಅಧ್ವಾನ ಉಂಟಾಗಿದೆ. ಗುಡ್ಡದ ಮಣ್ಣು, ಮರಗಳು ಜಾರಿ ಬೀಳುತ್ತಿರುವುದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಪ್ರಯಾಣಿಕರಲ್ಲಿ ಆತಂಕ ಉಂಟುಮಾಡಿದೆ.

ಮಾರನಹಳ್ಳಿ ಸಮೀಪದ ಹೆಗ್ಗದ್ದೆ ಗ್ರಾಮದಲ್ಲಿ 20 ದಿನಗಳ ಹಿಂದೆ ನಡೆದ ಸಣ್ಣ ಭೂಕುಸಿತ ಇದೀಗ ಮತ್ತಷ್ಟು ವ್ಯಾಪಕವಾಗಿದೆ. ನೂರಾರು ಅಡಿ ಎತ್ತರದ ಗುಡ್ಡದಿಂದ ಮಣ್ಣು ಹಂತ ಹಂತವಾಗಿ ಕುಸಿಯುತ್ತಿದ್ದು, ಸ್ಥಳೀಯ ನಿವಾಸಿಗಳು ಮನೆ ಖಾಲಿ ಮಾಡಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ.

ಮೊಬೈಲ್ ಟವರ್ ಉರುಳುವ ಭೀತಿಯೂ ಉಂಟಾಗಿ ಜನರಲ್ಲಿ ಆತಂಕ ಹೆಚ್ಚಾಗಿದೆ. ಶಿರಾಡಿ ಘಾಟ್‌ ವ್ಯಾಪ್ತಿಯಲ್ಲಿ ಹಲವೆಡೆ ಭಾರಿ ಮರಗಳು, ಮಣ್ಣಿನ ರಾಶಿಗಳು ರಸ್ತೆ ಮೇಲೆ ಬೀಳುತ್ತಿರುವ ಘಟನೆಗಳು ಸಂಭವಿಸಿದ್ದು, ದೋಣಿಗಲ್, ಕಪ್ಪಳ್ಳಿ, ದೊಡ್ಡತಪ್ಲು ಪ್ರದೇಶಗಳಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮಳೆ ಮುಂದುವರೆದರೆ ಶಿರಾಡಿ ಘಾಟ್ ಮಾರ್ಗದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande