ಬಳ್ಳಾರಿ, 17 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದಲ್ಲಿ ಕಾನೂನುಬಾಹಿರವಾಗಿ ಘಟಿಕೋತ್ಸವ ಪ್ರಮಾಣ ಪತ್ರಗಳ ವಿತರಣೆ ಆಗಿರುವ ಪ್ರಕರಣ ಹಾಗೂ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಅನಂತ್ ಎಲ್ ಝಂಡೇಕರ್ ಅವರು `ಪ್ರಭಾರಿ ಕುಲಪತಿ’ಗಳಾಗಿದ್ದಾಗ ಕೈಗೊಂಡಿರುವ ಕೆಲ ನಿರ್ಧಾರಗಳ ತನಿಖೆಗಾಗಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಡಿ.ಎಸ್. ಶಿಂಧೆ ಅವರು ನೇಮಕಗೊಂಡಿದ್ದಾರೆ.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಎಂ. ಮುನಿರಾಜು ಅವರು ಈ ಮಾಹಿತಿ ನೀಡಿದ್ದು, ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ಸಮಗ್ರವಾಗಿ ಚರ್ಚೆ ನಡೆದಿದ್ದು ಡಿ.ಎಸ್. ಶಿಂಧೆ ಅವರನ್ನು ತನಿಖಾಧಿಕಾರಿಗಳನ್ನಾಗಿ ನೇಮಕ ಮಾಡಲು ಅನುಮೋದನೆ ಸಿಕ್ಕಿದೆ. ಈ ನಿಟ್ಟಿನಲ್ಲಿ ಎರೆಡು ಪ್ರಕರಣಗಳ ಕುರಿತು ಡಿ.ಎಸ್. ಶಿಂಧೆ ಅವರು 45 ದಿನಗಳೊಳಗಾಗಿ ತನಿಖೆಯನ್ನು ಪೂರ್ಣಗೊಳಿಸಿ, ವಿಶ್ವವಿದ್ಯಾಲಯಕ್ಕೆ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್