ಸಿರವಾರ ಸರ್ಕಾರಿ ಶಾಲೆ ಛಾವಣಿ ಕುಸಿತ ; ಓರ್ವ ವಿದ್ಯಾರ್ಥಿಯ ತಲೆಗೆ ಪೆಟ್ಟು
ಬಳ್ಳಾರಿ, 17 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿಗೆ ಸಮೀಪದ ಸಿರವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಮೇಲ್ಛಾವಣಿ ಕುಸಿದು ಒಬ್ವ ವಿದ್ಯಾರ್ಥಿಯ ತೆಲೆಗೆ ಅಲ್ಪಪ್ರಮಾಣದ ಪೆಟ್ಟು ಬಿದ್ದ ಘಟನೆ ಮಂಗಳವಾರ ನಡೆದಿದೆ. ಮೂರನೇ ತರಗತಿಯ ವಿದ್ಯಾರ್ಥಿ ಸೋಮಲಿಂಗಪ್ಪ ಗಾಯಾಳು. ಈ ಶಾಲೆಯ
ಸಿರವಾರ ಸರ್ಕಾರಿ ಶಾಲೆ ಛಾವಣಿ ಕುಸಿತ ; ಓರ್ವ ವಿದ್ಯಾರ್ಥಿಯ ತಲೆಗೆ ಪೆಟ್ಟು


ಬಳ್ಳಾರಿ, 17 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಗೆ ಸಮೀಪದ ಸಿರವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಮೇಲ್ಛಾವಣಿ ಕುಸಿದು ಒಬ್ವ ವಿದ್ಯಾರ್ಥಿಯ ತೆಲೆಗೆ ಅಲ್ಪಪ್ರಮಾಣದ ಪೆಟ್ಟು ಬಿದ್ದ ಘಟನೆ ಮಂಗಳವಾರ ನಡೆದಿದೆ.

ಮೂರನೇ ತರಗತಿಯ ವಿದ್ಯಾರ್ಥಿ ಸೋಮಲಿಂಗಪ್ಪ ಗಾಯಾಳು. ಈ ಶಾಲೆಯಲ್ಲಿ 1 ರಿಂದ 8ನೇ 800 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಭ್ಯಸಿಸುತ್ತಿದ್ದಾರೆ. ಒಟ್ಟು 19 ಕೊಠಡಿಗಳಿವೆ. ಕೆಲ ದಿನಗಳಿಂದ ಸುರಿದ ಮಳೆಯಿಂದ ನಾಲ್ಕು ಕೊಠಡಿಗಳ ಮೇಲ್ಛಾವಣಿ ಸಂಪೂರ್ಣವಾಗಿ ಶಿಥಿಲಗೊಂಡಿದೆ.

ವಿದ್ಯಾರ್ಥಿ ಸೋಮಲಿಂಗಪ್ಪ ಮೇಲ್ಛಾವಣಿ ಶಿಥಿಲವಾಗಿರುವ ಕೊಠಡಿಯೊಳಗೆ ಮಂಗಳವಾರ ಬೆಳಗ್ಗೆ ಹೋದಾಗ, ಮೇಲ್ಛಾವಣಿ ಕುಸಿದು ತಲೆಗೆ ಪೆಟ್ಟಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande