ನಾಳೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಅವರ ಪ್ರವಾಸ
ಬಳ್ಳಾರಿ, 17 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಜೂ.18 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಳ್ಳುವರು. ಜೂನ್ 18 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 02 ರ ವರೆಗೆ ಜಿಲ್ಲೆಯ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನೀರಿಕ್ಷಿತ ಭೇಟ
ನಾಳೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ  ಅವರ ಪ್ರವಾಸ


ಬಳ್ಳಾರಿ, 17 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಜೂ.18 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಳ್ಳುವರು.

ಜೂನ್ 18 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 02 ರ ವರೆಗೆ ಜಿಲ್ಲೆಯ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನೀರಿಕ್ಷಿತ ಭೇಟಿ ಮತ್ತು ಪರಿಶೀಲನೆ ನಡೆಸುವರು.

ಬಳಿಕ ಮಧ್ಯಾಹ್ನ 02.30 ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗುವ ಆರ್.ಟಿ.ಇ, ಪೋಕ್ಸೋ ಮತ್ತು ಬಾಲನ್ಯಾಯ ಕಾಯ್ದೆ ಅನುಷ್ಠಾನದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande