ಶಾಲಾ ವಾಹನ ಉರುಳಿ ಬಿದ್ದು ೧೬ ವಿದ್ಯಾರ್ಥಿಗಳಿಗೆ ಗಾಯ
ಮೈಸೂರು, 18 ಜೂನ್ (ಹಿ.ಸ.) : ಆ್ಯಂಕರ್ : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಉರುಳಿ ಬಿದ್ದು 16 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಂಪಲಾಪುರದ ನೊಬೆಲ್ ಶಾಲೆಯ ವಾಹನದ ಮುಂಭಾಗದ ಟೈರ್ ಪಂಚರ್
Accident


ಮೈಸೂರು, 18 ಜೂನ್ (ಹಿ.ಸ.) :

ಆ್ಯಂಕರ್ : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಉರುಳಿ ಬಿದ್ದು 16 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಂಪಲಾಪುರದ ನೊಬೆಲ್ ಶಾಲೆಯ ವಾಹನದ ಮುಂಭಾಗದ ಟೈರ್ ಪಂಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಹಳ್ಳಕ್ಕೆ ಬಿದ್ದಿದೆ.

ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸಿ, ಗಾಯಗೊಂಡ ಮಕ್ಕಳನ್ನು ಮೈಸೂರು ಹಾಗೂ ಹುಣಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವು ಮಕ್ಕಳ ಸ್ಥಿತಿ ಗಂಭೀರವಾಗಿದ್ದರೂ, ಪ್ರಾಣಾಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಬಳಿಕ ಪೋಷಕರು ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ವಾಹನಗಳ ತಾಂತ್ರಿಕ ಪರಿಶೀಲನೆ ಹಾಗೂ ಚಾಲಕರ ತರಬೇತಿಯ ಅಗತ್ಯವಿದೆ ಎಂಬ ಚರ್ಚೆ ಸಕ್ರಿಯಗೊಂಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande