ಬೆಂಗಳೂರು, 18 ಜೂನ್ (ಹಿ.ಸ.) :
ಆ್ಯಂಕರ್ : ಮಾಜಿ ಸಂಸದ ಡಿ.ಕೆ. ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟಿಗಟ್ಟಲೆ ವಂಚನೆ ಮಾಡಿದ ಆರೋಪದ ಮೇಲೆ ಐಶ್ವರ್ಯಾ ಗೌಡ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿ ಹಲವೆಡೆ ಆಕೆ ವಿರುದ್ಧ ವಂಚನೆ ಪ್ರಕರಣಗಳು ದಾಖಲಾಗಿವೆ.
ಸಿಐಡಿಯ ಆರ್ಥಿಕ ಅಪರಾಧ ವಿಭಾಗ ಇದೀಗ ತನಿಖೆ ಮುಂದುವರಿಸಲಿದ್ದು, ಈ ಮೊದಲು ಬ್ಯಾಟರಾಯನಪುರ ಎಸಿಪಿ ಭರತ್ ರೆಡ್ಡಿ ತನಿಖೆ ನಡೆಸಿದ್ದರು. ಐಶ್ವರ್ಯಾ ಗೌಡ 9 ಕೋಟಿ ಮೌಲ್ಯದ ಚಿನ್ನ ವಂಚಿಸಿದ ಆರೋಪ ಎದುರಿಸುತ್ತಿದ್ದು, ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಮಾಲೀಕರು ಈ ಕುರಿತು ದೂರು ನೀಡಿದ್ದಾರೆ.
2024ರ ಡಿಸೆಂಬರ್ನಲ್ಲೇ ಡಿಕೆ ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದರಾದರೂ, ಇತ್ತೀಚೆಗೆ ಜಾರಿ ನಿರ್ದೇಶನಾಲಯ ತನಿಖೆಗೆ ಹಾಜರಾಗಲು ನೋಟಿಸ್ ನೀಡಿದೆ. ಜುಲೈ 19ರಂದು ಅವರು ವಿಚಾರಣೆಗೆ ಹಾಜರಾಗಬೇಕಿದೆ.
ಐಶ್ವರ್ಯಾ ಗೌಡ ಈಗಾಗಲೇ ಸೆಷನ್ಸ್ ಕೋರ್ಟ್ನಿಂದ ಜಾಮೀನು ಪಡೆದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa