ನವದೆಹಲಿ, 18 ಜೂನ್ (ಹಿ.ಸ.) :
ಆ್ಯಂಕರ್ : ಹಿಮಾಚಲ ಪ್ರದೇಶದ ಪ್ರವಾಹ, ಭೂಕುಸಿತ, ಮೇಘಸ್ಫೋಟದಂತಹ ನೈಸರ್ಗಿಕ ವಿಕೋಪಗಳಿಂದ ಉಂಟಾದ ಹಾನಿಗೆ ಪರಿಹಾರವಾಗಿ ಕೇಂದ್ರ ಸರ್ಕಾರವು ₹2006.40 ಕೋಟಿ ಮೌಲ್ಯದ ಚೇತರಿಕೆ ಮತ್ತು ಪುನರ್ನಿರ್ಮಾಣ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿಯಿಂದ ಅಂಗೀಕಾರ ಪಡೆದಿದೆ.
ಈ ಹಣದಲ್ಲಿ ₹1504.80 ಕೋಟಿ ಕೇಂದ್ರದ ಕೊಡುಗೆಯಾಗಿದ್ದು, ಉಳಿದದ್ದು ವಿವಿಧ ಅನುದಾನಗಳಿಂದ ಲಭ್ಯವಾಗಲಿದೆ. ಈ ಯೋಜನೆಯ ಉದ್ದೇಶವು ನೈಸರ್ಗಿಕ ವಿಪತ್ತುಗಳಿಂದ ಉಂಟಾದ ಹಾನಿಯನ್ನು ತ್ವರಿತವಾಗಿ ತಿದ್ದುಪಡಿ ಮಾಡುವುದು ಮತ್ತು ಪುನರ್ ನಿರ್ಮಾಣ ಕಾರ್ಯಗಳಿಗೆ ಬಲ ನೀಡುವುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa