ಕೊಪ್ಪಳ, 18 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳದ ಭಾಗ್ಯನಗರ ನಿವಾಸಿಯಾದ ಬಸವರಾಜ ಸಿದ್ದನಗೌಡ ಬುಡ್ಡನಗೌಡ್ರು(50) ಕಾನೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 41/2024 ಕಲಂ: ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ಚಹರೆ:
ವ್ಯಕ್ತಿಯು 5.2 ಅಡಿ ಎತ್ತರವಿದ್ದು, ಸಾದಾಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು, ಉದ್ದಮೂಗು, ಕೋಲುಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ನೀಲಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಲುಂಗಿ ಧರಿಸಿದ್ದರು.
ಮೇಲ್ಕಂಡ ಚಹರೆಯ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಕಂಟ್ರೋಲ್ ರೂಂ.08539-230100, 230222, ನಗರ ಠಾಣೆ ಪಿಎಸ್ಐ: 9480803745, ನಗರ ಠಾಣೆ: 08539-220333 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕೊಪ್ಪಳ ನಗರ ಪೊಲೀಸ್ ಠಾಣೆ ತಿಳಿಸಿದೆ. .
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್