ಬಳ್ಳಾರಿ, 18 ಜೂನ್ (ಹಿ.ಸ.) :
ಆ್ಯಂಕರ್ : ಹೈದರಾಬಾದ್ ಕರ್ನಾಟಕದಲ್ಲಿ ಕೌಶಲ್ಯ ಆಧಾರಿತ ಶಿಕ್ಷಣ ನೀಡುವ ಸಂಸ್ಥೆಗಳು ಅಭಿವೃದ್ಧಿಯಾಗಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಅವರು ತಿಳಿಸಿದ್ದಾರೆ.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಬದುಕು ಸೆಂಟರ್ ಫಾರ್ ಲೌಲ್ಲಿಹುಡ್ಸ್ ಲರ್ನಿಂಗ್, ಬೆಂಗಳೂರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಕನ್ನಡ ಅಧ್ಯಯನ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಪ್ರಾರಂಭವಾದ ‘ಸಮೂಹ ಸಂವಹನ ಮತ್ತು ಕನ್ನಡ’ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಯೋಜನೆಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಬೇಕಾಗಿದೆ. ಲೌಲ್ಲಿಹುಡ್ಸ್ ಲರ್ನಿಂಗ್ ಸಂಸ್ಥೆಗಳು ಈ ಭಾಗದಲ್ಲಿಲ್ಲ. ಈ ಭಾಗದಲ್ಲಿ ಶಿಕ್ಷಣಕ್ಕೆ ಪೂರಕವಾದ ಕೈಗಾರಿಕೆಗಳು ನಿರ್ಮಾಣವಾಗಬೇಕು. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವಾರು ಅವಕಾಶಗಳಿದ್ದರು ಈ ಭಾಗದಲ್ಲಿ ಕಡೆಗಣಿಸಲಾಗುತ್ತಿದೆ ಎಂದರು.
ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್. ರುದ್ರೇಶ್ ಅವರು, ಸಾಹಿತ್ಯವು ಓದುಗರ ಬದುಕನ್ನು ಕಟ್ಟಿಕೊಳ್ಳವ ಕೆಲಸವನ್ನು ಮಾಡುತ್ತದೆ. ಸಾಹಿತ್ಯವನ್ನು ಅರಗಿಸಿಕೊಂಡು ಬೆಳೆದಷ್ಟು ವಿದ್ಯಾರ್ಥಿಗಳು ಅಭಿವೃದ್ದಿ ಹೊಂದುತ್ತಾರೆ. ವಿದ್ಯಾರ್ಥಿಗಳಿಗೆ ಗುರಿಯೊಂದೇ ಮುಖ್ಯವಲ್ಲ, ಗುರಿಯ ಜೊತೆಗೆ ಮಾರ್ಗವು ಮುಖ್ಯವಾಗಿರುತ್ತದೆ ಎಂದು ಹೇಳಿದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಜಿ.ಕೆ. ಸಂತೋಷ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬದುಕು ಸೆಂಟರ್ ಫಾರ್ ಲೌಲ್ಲಿಹುಡ್ಸ್ ಲರ್ನಿಂಗ್, ಬೆಂಗಳೂರು ಮಾಧ್ಯಮ ಅಧ್ಯಾಪಕರು ಹಾಗೂ ಲೇಖಕರಾದ ದಯಾನಂದ, ಕಲಾ ನಿಕಾಯದ ಡೀನರಾದ ಪ್ರೊ. ರಾಬರ್ಟ್ ಜೋಸ್, ಪ್ರದರ್ಶನ ಕಲೆ ನಾಟಕ ವಿಭಾಗದ ಮುಖ್ಯಸ್ಥರಾದ ಪ್ರೊ. ಎನ್. ಶಾಂತನಾಯ್ಕ್, ಡಾ. ಕೆ.ಎಸ್. ಶಿವಪ್ರಕಾಶ ವೇದಿಕೆ ಮೇಲೆÉ ಉಪಸ್ಥಿತರಿದ್ದರು.
ವಿವಿಯ ಕನ್ನಡ ಅಧ್ಯಯನ ವಿಭಾಗದ ಉಪನ್ಯಾಸಕರಾದ ಡಾ. ಆರನಕಟ್ಟೆ ರಂಗನಾಥ ಅವರು ಕಾರ್ಯಕ್ರಮ ನಿರೂಪಿಸಿದರು. ಡಾ. ಶಕೀಲಾ.ಕೆ ಅವರು ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್