ಕೊಪ್ಪಳ, 18 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಶೇಖರಗೌಡ ಜಿ. ರಾಮತ್ನಾಳ ಮತ್ತು ಕೆ.ಟಿ.ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಜೂನ್ 20ರಂದು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳು ಕೊಪ್ಪಳ ಜಿಲ್ಲೆಯಲ್ಲಿ ಜೂ. 19ರಂದು ಶಾಲೆ, ಅಂಗನವಾಡಿ, ಗ್ರಾಮ ಪಂಚಾಯತ್, ವಸತಿ ನಿಲಯ ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.
ಜೂ. 20ರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ಹಾಗೂ ಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ತಡೆಗಟ್ಟುವ ಸಂಬಂಧ ವಿವಿಧ ಭಾಗೀದಾರರ ಇಲಾಖೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಿದ್ದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಪ್ಪದೇ ಸಭೆಗೆ ಆಗಮಿಸುವಂತೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್