ಬಳ್ಳಾರಿ, 18 ಜೂನ್ (ಹಿ.ಸ.) :
ಆ್ಯಂಕರ್ : ಅಂಚೆ ಇಲಾಖೆಯ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿ ಪಡೆಯುತ್ತಿರುವ ನಿವೃತ್ತ ಅಂಚೆ ನೌಕರರ ಕುಟುಂಬದವರಿಗಾಗಿ ಜೂನ್ 25 ರ ಬುಧವಾರ ಸಂಜೆ 04 ಗಂಟೆಗೆ ಬಳ್ಳಾರಿ ವಿಭಾಗೀಯ ಅಂಚೆ ಕಚೇರಿಯಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.
ಪಿಂಚಣಿದಾರರು ತಮ್ಮ ಕುಂದು-ಕೊರತೆಗಳಿದ್ದಲ್ಲಿ ಬಳ್ಳಾರಿ ವಿಭಾಗದ ಕೋಟೆ ಪ್ರದೇಶದ ಅಂಚೆ ವಿಭಾಗೀಯ ಕಾರ್ಯಾಲಯ ಅಧೀಕ್ಷಕರ ಕಚೇರಿಗೆ ಜೂ.23 ರೊಳಗಾಗಿ ಮುಂಚಿತವಾಗಿ ತಲುಪುವಂತೆ ಪತ್ರ ಮೂಲಕ ಅಥವಾ doballari.ka@indiapost.gov.in ಗೆ ಇ-ಮೇಲ್ ಮುಖಾಂತರ ಕಳುಹಿಸಿಕೊಡಬಹುದು. ತಮ್ಮ ಅಹವಾಲುನೊಂದಿಗೆ ಜೂ.25 ರಂದು ನಡೆಯುವ ಪಿಂಚಣಿ ಅದಾಲತ್ನಲ್ಲಿ ಭಾಗವಹಿಸಬಹುದು.
ಅದಾಲತ್ನಲ್ಲಿ ಭಾಗವಹಿಸುವವರಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್