ಬೆಂಗಳೂರು, 18 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ವಿಕಾಸ ಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಚಿವ ಸತೀಶ್ ಜಾರಕಿಹೊಳಿ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಸಭೆಯಲ್ಲಿ ನಾನಾ ಜಿಲ್ಲೆಗಳಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ, ಸೇತುವೆ ಕಾಮಗಾರಿಗಳು, ಸಾರ್ವಜನಿಕ ಕಟ್ಟಡಗಳ ನಿರ್ಮಾಣ ಮತ್ತು ಪುನರ್ ವಸತಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಚಿವರು, ಕಾಮಗಾರಿಗಳ ಗತಿಶೀಲತೆ, ಮುಗಿಸುವ ಅವಧಿ, ಗುಣಮಟ್ಟದ ಮಾನದಂಡಗಳು ಮತ್ತು ಅನುದಾನದ ಬಳಕೆ ಕುರಿತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.
ಅಡಚಣೆಗಳಿರುವ ರಾಷ್ಟ್ರೀಯ ಮತ್ತು ರಾಜ್ಯದ ಯೋಜನೆಗಳ ಕುರಿತು ಚರ್ಚಿಸಿ, ಅವುಗಳ ತ್ವರಿತ ಪರಿಹಾರಕ್ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಮುಖ್ಯಾಧಿಕಾರಿ ಹಾಗೂ ಉನ್ನತ ಅಧಿಕಾರಿಗಳು, ಮುಖ್ಯ ಇಂಜಿನಿಯರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa