ತುರ್ತು ಪರಿಸ್ಥಿತಿ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ
ಬೆಂಗಳೂರು, 19 ಜೂನ್ (ಹಿ.ಸ.): ಆ್ಯಂಕರ್:ಜೂನ್‌ 25 ರಂದು ದೇಶದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ 50 ವರ್ಷಗಳಾಗಲಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನವನ್ನು ವಿವಿಧ ಜಿಲ್ಲೆಗಳಲ್ಲಿ ಜೂನ್‌ 22 ರಿಂದ 30 ರ ವರೆಗೆ ಹಮ್ಮಿಕೊಂಡಿದ
Bjp


ಬೆಂಗಳೂರು, 19 ಜೂನ್ (ಹಿ.ಸ.):

ಆ್ಯಂಕರ್:ಜೂನ್‌ 25 ರಂದು ದೇಶದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ 50 ವರ್ಷಗಳಾಗಲಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನವನ್ನು ವಿವಿಧ ಜಿಲ್ಲೆಗಳಲ್ಲಿ ಜೂನ್‌ 22 ರಿಂದ 30 ರ ವರೆಗೆ ಹಮ್ಮಿಕೊಂಡಿದೆ,

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಸಿ. ಟಿ. ರವಿ ಅಭಿಯಾನದ ಪೋಸ್ಟರ್‌ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ‌ರಾದ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್‌ ಕುಮಾರ್,‌ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಸಿ. ಕೆ. ರಾಮಮೂರ್ತಿ, ಎಸ್. ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ, ರಾಜ್ಯ ಕಾರ್ಯಕಾರಿಣಿ ನಿಕಟಪೂರ್ವ ಸದಸ್ಯರಾದ ಶ್ರೀಮತಿ ಪೂರ್ಣಿಮಾ ಪ್ರಕಾಶ್ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande