ಬಳ್ಳಾರಿ, 19 ಜೂನ್ (ಹಿ.ಸ.)
ಆ್ಯಂಕರ್: ಮಾನ್ಸೂನ್ ಮಳೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಸಾಧ್ಯತೆಗಳು ಇರುವುದರಿಂದ ಎಲ್ಲ ಗ್ರಾಮಗಳಲ್ಲಿಯ ಕುಡಿಯುವ ನೀರಿನ ಮೂಲಗಳಾದ ಕೆರೆ, ಬಾವಿ, ಕೊಳವೆಬಾವಿ ಮುಂತಾದವುಗಳ ಸುರಕ್ಷತೆಯ ಬಗ್ಗೆ ಅಧಿಕಾರಿಗಳು ಖಚಿತ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.
ಗುರುವಾರದಂದು, ಕುಡಿಯುವ ನೀರು ಸರಬುರಾಜು, ಶುದ್ಧೀಕರಣ, ತಾಂತ್ರಿಕ ಬೆಂಬಲ ನೀಡುವುದರ ಕುರಿತು ಸಂಬಂಧಿಸಿದ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಕೈಗೊಂಡು ಅವರು ಮಾತನಾಡಿದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಾಂತಿ-ಭೇದಿ ಪ್ರಕರಣಗಳು ಸಂಭವಿಸದಂತೆ ಕೆರೆ, ಕೈ-ಪಂಪು, ಕೊಳವೆ ಬಾವಿಗಳ ಸುತ್ತಮುತ್ತ ಸ್ವಚ್ಛತೆ, ನೀರಿನ ಮೂಲಗಳ ಹತ್ತಿರವಿರುವ ಮುಖ್ಯ ವಾಲ್ಗಳು (ರೈಸಿಂಗ್ ವಾಲ್) ಮತ್ತು ಸರಬರಾಜು ಪೈಪ್ಲೈನ್ ಸೋರಿಕೆ ಪತ್ತೆಹಚ್ಚುವಿಕೆ ಹಾಗೂ ದುರಸ್ಥಿ, ಓವರ್ಹೆಡ್ ಟ್ಯಾಂಕ್ ಒಳಗಡೆ ಮತ್ತು ಹೊರಗಡೆ ಸುತ್ತಮುತ್ತ ಸ್ವಚ್ಛಗೊಳಿಸುವುದು ಎಂದರು.
ಶಾಲಾ ಆವರಣದಲ್ಲಿಯ ನೀರಿನ ಸಂಗ್ರಹಕಗಳ ನೀರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಹಾಗೂ ಪ್ರಭಾರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ಅಬ್ದುಲ್ಲಾ ಸೇರಿದಂತೆ ಗ್ರಾಮೀಣ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸ್ಥಳೀಯ ಸಂಸ್ಥೆಗಳ ಅಧಿಕಾರಿ, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್